Advertisement

ಉತ್ತರ ಗೋವಾದ ಶ್ರೀರುದ್ರೇಶ್ವರ ದೇವಸ್ಥಾನಕ್ಕೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಭೇಟಿ

03:56 PM Sep 21, 2021 | Team Udayavani |

ಪಣಜಿ: ಗೋವಾಕ್ಕೆ ಆಗಮಿಸಿರುವ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರವರು ಉತ್ತರ ಗೋವಾದ ಸಾಖಳಿಯ ಹರವಳೆಯ ಶ್ರೀರುದ್ರೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

Advertisement

ಕೇಜ್ರಿವಾಲ್ ರವರು ದೇವಸ್ಥಾನಕ್ಕೆ ಆಗಮಿಸುವ ಸಂದರ್ಭದಲ್ಲಿ ಪುಷ್ಪವೃಷ್ಠಿ ನಡೆಸಿ ಅವರನ್ನು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಗೋವಾ ಪ್ರಭಾರಿ ದುರ್ಗೇಶ್ ಫಾಟಕ್, ಅಂಕುಶ್ ನಾರಂಗ, ರಾಹುಲ್ ಮಾಂಮ್ರೆ, ಮತ್ತಿತರರು ಉಪಸ್ಥಿತರಿದ್ದರು.

ಗೋವಾಕ್ಕೆ ಆಗಮಿಸಿರುವ ಅರವಿಂದ ಕೇಜರಿವಾಲ್ ರವರು 2022 ರ ಫೆಬ್ರವರಿಯಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ರಣನೀತಿ ರೂಪಿಸಲಿದ್ದಾರೆ. ಪಕ್ಷದ ರಾಜ್ಯ ಪ್ರಮುಖರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ : ನಾಲ್ಕು ದಿನದ ಹಿಂದೆ ಭದ್ರಾ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next