Advertisement
ಇದನ್ನೂ ಓದಿ:Spandana: ಎದೆಗೊತ್ತಿ ಪ್ರೀತಿಸುವೆ.. ವಿವಾಹ ವಾರ್ಷಿಕ ದಿನ ಪತ್ನಿ ನೆನೆದು ರಾಘು ಭಾವುಕ
Related Articles
Advertisement
ಇದೊಂದು ಅಪರಾಧ ಕೃತ್ಯಗಳ ಪ್ರದೇಶ ಎಂದೇ ಪರಿಗಣಿಲ್ಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಸುಮಾರು 15 ಮಂದಿ ಶಸ್ತ್ರ್ ಸಜ್ಜಿತ ಪೊಲೀಸರು ಪ್ರದೇಶವನ್ನು ಸುತ್ತುವರಿದಿದ್ದರು. ರಘುಬೀರ್ ನಗರದ ಸಿ ಬ್ಲಾಕ್ ನ ಟ್ಯಾಗೋರ್ ಗಾರ್ಡರ್ನ್ಸ್ ನಲ್ಲಿ ಆರೋಪಿತ ದಂಪತಿಯನ್ನು ಸೆರೆಹಿಡಿದಿದ್ದು, ಈ ಸಂದರ್ಭದಲ್ಲಿ ಮಗು ಕೂಡಾ ಪತ್ತೆಯಾಗಿತ್ತು ಎಂದು ಡೆಪ್ಯುಟಿ ಪೊಲೀಸ್ ಕಮಿಷನರ್ ಸಾಗರ್ ಸಿಂಗ್ ಕಾಲ್ಸಿ ತಿಳಿಸಿದ್ದಾರೆ.
ಬಂಧಿತ ದಂಪತಿಯನ್ನು ವಿಚಾರಣೆಗೊಳಪಡಿಸಿದಾಗ, ಕಳೆದ ವರ್ಷ ಆಗಸ್ಟ್ 17ರಂದು ತಮ್ಮ 17 ವರ್ಷದ ಪುತ್ರ ಟೇರೇಸ್ ನಿಂದ ಬಿದ್ದು ಸಾವನ್ನಪ್ಪಿದ್ದ. ಈ ವಿಷಯ ನಮ್ಮ ಮಗಳಿಗೆ ತಿಳಿದಿಲ್ಲ. ಏತನ್ಮಧ್ಯೆ ರಕ್ಷಾ ಬಂಧನ ದಿನಾಚರಣೆಯಂದು ತನಗೆ ರಾಖಿ ಕಟ್ಟಲು ಸಹೋದರ ಬೇಕೆಂದು ಮಗಳು ಇಚ್ಛೆಯನ್ನು ವ್ಯಕ್ತಪಡಿಸಿರುವುದಾಗಿ ಸಂಜಯ್ ಮತ್ತು ಅನಿತಾ ತಿಳಿಸಿದ್ದರು.
ಮಗಳ ಇಚ್ಛೆಯನ್ನು ಈಡೇರಿಸುವ ನಿಟ್ಟಿನಲ್ಲಿ ದಂಪತಿ ಮಗುವನ್ನು ಅಪಹರಿಸಲು ನಿರ್ಧರಿಸಿದ್ದರು. ಅದರಂತೆ ಛಟ್ಟಾ ರೈಲ್ ಚೌಕ್ ಬಳಿ ಮಲಗಿದ್ದ ದಂಪತಿಯ ಪಕ್ಕದಲ್ಲಿದ್ದ ಒಂದು ತಿಂಗಳ ಗಂಡು ಮಗುವನ್ನು ಅಪಹರಿಸಿರುವುದಾಗಿ ತನಿಖೆ ವೇಳೆ ತಿಳಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಂಜಯ್ ಟ್ಯಾಟೋ ಆರ್ಟಿಸ್ಟ್ ಆಗಿದ್ದು, ಪತ್ನಿ ಅನಿತಾ ಮೆಹಂದಿ ಆರ್ಟಿಸ್ಟ್ ಆಗಿರುವುದಾಗಿ ವರದಿ ತಿಳಿಸಿದೆ. ಮಗುವಿನ ತಾಯಿಗೆ ಎರಡೂ ಕೈ ಮತ್ತು ಕಾಲುಗಳಿಲ್ಲ. ತಂದೆ ಚಿಂದಿ ಆಯುವ ಕೆಲಸ ಮಾಡುತ್ತಿದ್ದು, ದಂಪತಿಗೆ ಮನೆ ಇಲ್ಲದಿದ್ದರಿಂದ ಫುಟ್ ಪಾತ್ ನಲ್ಲೇ ಆಶ್ರಯ ಪಡೆದಿರುವುದಾಗಿ ವರದಿ ವಿವರಿಸಿದೆ.