Advertisement

ಪೌರತ್ವ ಪ್ರತಿಭಟನೆ;ಹಿಂಸಾಚಾರದಲ್ಲಿ ಭಾಗಿಯಾದ 15 ಜನರ ಬೇಲ್ ಅರ್ಜಿ ವಜಾ

09:50 AM Dec 24, 2019 | Nagendra Trasi |

ನವದೆಹಲಿ:ನೂತನ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದ ವೇಳೆ ನಡೆದ ಹಿಂಸಾಚಾರ ಪ್ರಕರಣದಲ್ಲಿ ದರ್ಯಾಗಂಜ್ ಪ್ರದೇಶದಲ್ಲಿ ಬಂಧಿಸಲ್ಪಟ್ಟಿದ್ದ ಹದಿನೈದು ಜನರ ಜಾಮೀನು ಅರ್ಜಿಯನ್ನು ದಿಲ್ಲಿ ಕೋರ್ಟ್ ಸೋಮವಾರ ವಜಾಗೊಳಿಸಿದೆ.

Advertisement

ದರ್ಯಾಗಂಜ್ ನ ಸುಭಾಶ್ ಮಾರ್ಗ ಪ್ರದೇಶದಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಡಿಸಿಪಿ ಕಚೇರಿ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರನ್ನು ಬೆಂಕಿ ಹಚ್ಚಿ ಸುಟ್ಟಿದ್ದರು. ಉದ್ರಿಕ್ತ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮತ್ತು ಜಲಫಿರಂಗಿಯನ್ನು ಪ್ರಯೋಗಿಸಿದ್ದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಿಲ್ಲಿಯಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಜಾಮೀಯಾ ಮಿಲ್ಲಿಯಾ ವಿವಿ ವಿದ್ಯಾರ್ಥಿಗಳ ಪ್ರತಿಭಟನೆಯೂ ಹಿಂಸಾಚಾರಕ್ಕೆ ಎಡೆ ಮಾಡಿಕೊಟ್ಟ ಪರಿಣಾಮ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿತ್ತು.

ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿ-ಪಾಸ್ತಿಗೆ ನಷ್ಟ ಉಂಟು ಮಾಡಿದವರ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next