Advertisement

ನಿರ್ಭಯಾ ಅತ್ಯಾಚಾರಿಗಳಿಗೆ ನಾಳೆ ಗಲ್ಲು ಇನ್ನೂ ಡೌಟ್

04:01 PM Mar 02, 2020 | Hari Prasad |

ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ದೋಷಿಗಳೆಂದು ವಿಚಾರಣಾ ನ್ಯಾಯಾಲಯದಿಂದ ಘೋಷಿಸಲ್ಪಟ್ಟು ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ನಿಗದಿಯಾಗಿರುವ ಮಾರ್ಚ್ 3ರಂದು ಗಲ್ಲು ಶಿಕ್ಷೆ ಜಾರಿಯಾಗುವ ಕುರಿತು ಇದೀಗ ಗೊಂದಲ ಉಂಟಾಗಿದೆ.

Advertisement

ನಿರ್ಭಯಾ ಅಪರಾಧಿಗಳಿಗೆ ಮಾರ್ಚ್ 3ರಂದು ಗಲ್ಲಿಗೇರಿಸುವಂತೆ ಹೊರಡಿಸಲಾಗಿರುವ ಡೆತ್ ವಾರಂಟ್ ಗೆ ತಡೆ ನೀಡಬೇಕು ಎಂದು ಅಪರಾಧಿಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯವು ಇಂದು ತಿರಸ್ಕರಿಸಿದೆ.

ಆದರೆ ತಕ್ಷಣವೇ ಅಪರಾಧಿಗಳಲ್ಲಿ ಒಬ್ಬನಾಗಿರುವ ಪವನ್ ಗುಪ್ತಾ ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದಾನೆ. ಹಾಗಾಗಿ ನಿರ್ಭಯಾ ಅತ್ಯಾಚಾರಿಗಳನ್ನು ನಾಳೆ ಗಲ್ಲಿಗೇರಿಸುವ ಕುರಿತಾದ ಗೊಂದಲ ಇನ್ನೂ ಮುಂದುವರೆದಿದೆ.


ಪವನ್ ಗುಪ್ತಾ ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿರುವ ವಿಚಾರವನ್ನು ಆತನ ವಕೀಲರು ನ್ಯಾಯಾಲಯಕ್ಕೆ ತಿಳಿಸಿ, ಈ ಹಿನ್ನಲೆಯಲ್ಲಿ ಗಲ್ಲು ಶಿಕ್ಷೆಗೆ ತಡೆ ನೀಡಬೇಕೆಂದು ವಕೀಲರು ಮನವಿ ಮಾಡಿದಾಗ ಮಧ್ಯಾಹ್ನ 2 ಗಂಟೆಯ ಬಳಿಕ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಾಧೀಶರು ತಿಳಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next