Advertisement

ತೀವ್ರ ಜ್ವರ ಸೇರಿ ಸೋಂಕು ಲಕ್ಷಣಗಳ ಕಾರಣ ಆಸ್ಪತ್ರೆಗೆ ದಾಖಲಾದ ದಿಲ್ಲಿ ಆರೋಗ್ಯ ಸಚಿವ

03:49 PM Jun 16, 2020 | keerthan |

ಹೊಸದಿಲ್ಲಿ: ತೀವ್ರ ಜ್ವರ, ಉಸಿರಾಟ ಸಮಸ್ಯೆ ಮುಂತಾದ ಕೋವಿಡ್ ಸೋಂಕು ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ದಿಲ್ಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Advertisement

ಸೋಮವಾರ ರಾತ್ರಿ ಸತ್ಯೇಂದರ್ ಜೈನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿಲ್ಲಿಯ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸತ್ಯೇಂದರ್ ಜೈನ್ ಅವರ ಕೋವಿಡ್-19 ಸೋಂಕು ಪರೀಕ್ಷೆ ಮಾಡಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ.

ಈ ಬಗ್ಗೆ ಸ್ವತಃ ಸತ್ಯೇಂದರ್ ಜೈನ್ ಅವರು ಟ್ವೀಟರ್ ಮೂಲಕ ಈ ವಿಷಯವನ್ನು ಖಚಿತಪಡಿಸಿದ್ದು, ತೀವ್ರ ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದಿದ್ದಾರೆ.

ಶನಿವಾರ ಗೃಹ ಇಲಾಖೆಯ ಸಭೆಯಲ್ಲಿ ಸಚಿವ ಸತ್ಯೇಂದರ್ ಜೈನ್ ಭಾಗವಹಿಸಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಗೃಹ ಸಚಿವ ಡಾ ಹರ್ಷವರ್ಧನ್, ದಿಲ್ಲಿ ರಾಜ್ಯಪಾಲ ಅನಿಲ್ ಬೈಜಾಲ್, ಸಿಎಂ ಅರವಿಂದ ಕೇಜ್ರಿವಾಲ್, ಡಿಸಿಎಂ ಮನೀಶ್ ಸಿಸೋಡಿಯಾ ಮುಂತಾದವರು ಭಾಗವಹಿಸಿದ್ದರು.

ಕಳೆದ ವಾರ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜ್ವರ ಕಾಣಿಸಿಕೊಂಡ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಕೋವಿಡ್ ನೆಗೆಟಿವ್ ವರದಿಯಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next