Advertisement

ದಿಲ್ಲಿ ಅಗ್ನಿ ದುರಂತ : ಮೃತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ

12:14 PM Feb 12, 2019 | Team Udayavani |

ಹೊಸದಿಲ್ಲಿ : ದಿಲ್ಲಿಯ ಕರೋಲ್‌ ಬಾಗ್‌ ಹೊಟೇಲ್‌ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. 

Advertisement

ದುರಂತದಲ್ಲಿ 17 ಮಂದಿ ಮೃತಪಟ್ಟಿರುವುದಕ್ಕೆ ತೀವ್ರ ಶೋಕ ವ್ಯಕ್ತಪಡಿಸಿರುವ ದಿಲ್ಲಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯ ಅವರು ಇಂದು ಸಂಜೆ ನಡೆಯಲಿದ್ದ ಆಪ್‌ ಸರಕಾರ ನಾಲ್ಕು ವರ್ಷ ಪೂರೈಸಿದ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆ. 

ದಿಲ್ಲಿ ಹೊಟೇಲ್‌ ದುರಂತದ ಮ್ಯಾಜಿಸ್ಟ್ರೇಟ್‌ ತನಿಖೆಯನ್ನು ಆದೇಶಿಸಲಾಗಿರುವುದಾಗಿ ಸಚಿವ ಸತ್ಯೇಂದ್ರ ಜೈನ್‌ ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next