Advertisement

ಬಿಆರ್‌ಎಸ್‌ ಕವಿತಾಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ

11:07 PM Mar 15, 2023 | Team Udayavani |

ನವದೆಹಲಿ: ದೆಹಲಿ ಅಬಕಾರಿ ಹಗರಣದಲ್ಲಿ ಇ.ಡಿ.ಯಿಂದ ವಿಚಾರಣೆ ಎದುರಿಸುತ್ತಿರುವ ಬಿಆರ್‌ಎಸ್‌ ಎಂಎಲ್‌ಸಿ ಕೆ.ಕವಿತಾ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.

Advertisement

ಕೇಂದ್ರ ಸರ್ಕಾರ ನಡೆಸುತ್ತಿರುವ ದೊಡ್ಡ ಪ್ರಮಾಣದ ಸಂಚು ಇದು. ಈ ಹಿನ್ನೆಲೆಯಲ್ಲಿಯೇ ಜಾರಿ ನಿರ್ದೇಶನಾಲಯದ ವತಿಯಿಂದ ನಡೆಯುತ್ತಿರುವ ವಿಚಾರಣೆಯೇ ಪ್ರಶ್ನಾರ್ಹ.

ಇದರ ಜತೆಗೆ, ಮಹಿಳೆಯನ್ನು ಜಾರಿ ನಿರ್ದೇಶನಾಲಯಕ್ಕೆ ಕರೆಯಿಸಿಕೊಂಡು ವಿಚಾರಣೆ ನಡೆಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತುರ್ತು ವಿಚಾರಣೆ ನಡೆಸಬೇಕು ಎಂದು ಅರಿಕೆ ಮಾಡಿಕೊಂಡಿದ್ದಾರೆ. ಅದಕ್ಕೆ ಒಪ್ಪದ ನ್ಯಾಯಪೀಠ, ಮಾ.24ಕ್ಕೆ ಕವಿತಾ ಸಲ್ಲಿಕೆ ಮಾಡಿರುವ ಅರ್ಜಿಯನ್ನು ಕೈಗೆತ್ತಿಕೊಳ್ಳುವುದಾಗಿ ಸ್ಪಷ್ಟಪಡಿಸಿತು.

Advertisement

Udayavani is now on Telegram. Click here to join our channel and stay updated with the latest news.

Next