Advertisement

ಕೋವಿಡ್ 19: ಲಾಕ್ ಡೌನ್ ಆದೇಶ ಪಾಲಿಸಲ್ಲ ಎಂದು ತಂದೆ ವಿರುದ್ಧ ದೂರು ಕೊಟ್ಟ ಮಗ!

09:02 AM Apr 04, 2020 | Nagendra Trasi |

ನವದೆಹಲಿ:ಲಾಕ್ ಡೌನ್ ಆದೇಶವನ್ನು ಗಾಳಿಗೆ ತೂರಿ ನನ್ನ ತಂದೆ ಹೊರಗಡೆ ತಿರುಗಾಡುತ್ತಿದ್ದಾರೆ ಎಂದು ಸ್ವತಃ ಮಗನೇ ತಂದೆ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಘಟನೆ ನೈರುತ್ಯ ದೆಹಲಿಯ ವಸಂತ್ ಕುಂಜ್ ನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.

Advertisement

ವಸಂತ್ ಕುಂಜ್ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅಭಿಷೇಕ್ (30) ಎಂಬ ಯುವಕ ತಂದೆ ವಿರೇಂದ್ರ ಸಿಂಗ್ (59ವರ್ಷ) ವಿರುದ್ಧ ದೂರು ನೀಡಿದ್ದ. ನನ್ನ ತಂದೆ ಲಾಕ್ ಡೌನ್ ಆದೇಶ ಪಾಲಿಸದೇ ಈ ಪ್ರದೇಶದಲ್ಲಿ ಓಡಾಡುತ್ತಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿರುವುದಾಗಿ ವರದಿ ವಿವರಿಸಿದೆ.

ಅಭಿಷೇಕ್ ರಾಜೋಕಾರಿ ಪ್ರದೇಶದಲ್ಲಿ ವಾಸಿಸುತ್ತಿದ್ದು, ಆಟೋಮೊಬೈಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದಾನೆ.  ಕೋವಿಡ್ 19 ಮಾರಣಾಂತಿಕ ವೈರಸ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ್ದರು.

ಕೋವಿಡ್ 19 ವೈರಸ್ ಭಾರತದಲ್ಲಿ ಈಗಾಗಲೇ ಕ್ಷಿಪ್ರವಾಗಿ ಹಬ್ಬುತ್ತಿದ್ದು, 50ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 2000 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next