Advertisement

ದೆಹಲಿ: ಜಗಳವಾಡಿದ ನಂತರ ಪತ್ನಿಯನ್ನು ಕೊಂದು ನೇಣಿಗೆ ಶರಣಾದ ಪತಿ

08:25 PM Jul 02, 2021 | Team Udayavani |

ನವದೆಹಲಿ: ಪತ್ನಿ ಜತೆಗಿನ ಜಗಳ ತಾರಕಕ್ಕೇರಿದ ನಂತರ ಪತಿ ಪತ್ನಿಯನ್ನು ಕೊಂದು ನಂತರ ತಾನು ಕೂಡಾ ನೇಣಿಗೆ ಶರಣಾಗಿರುವ ಘಟನೆ ದೆಹಲಿಯ ವಸಂತ್ ಕುಂಜ್ ಪ್ರದೇಶದಲ್ಲಿ ಶುಕ್ರವಾರ(ಜುಲೈ 02) ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

ಇದನ್ನೂ ಓದಿ:ಮನೆ ಕಟ್ಟಿ ಕೊಡದಿದ್ದಕ್ಕೆ ಪ್ರವಾಹ ಸಂತ್ರಸ್ತರಿಂದ ಸಚಿವ ಅಂಗಾರ ಗೆ ಕ್ಲಾಸ್..!

ಗಂಡ, ಹೆಂಡತಿ ಜಗಳವಾಡುತ್ತಿದ್ದ ಬಗ್ಗೆ ನೆರೆಹೊರೆಯವರು ತಿಳಿಸಿದ್ದು, ಕೊಲೆ ಹಾಗೂ ಆತ್ಮಹತ್ಯೆಯ ಹಿಂದಿನ ಕಾರಣವೇನು ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮನೆಯೊಳಗೆ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 61 ವರ್ಷದ ಜಾಹೀದ್ ಅಲಿ ಮತ್ತು ಪತ್ನಿ ನಾಜ್ನೀನ್ (53ವರ್ಷ) ನಡುವೆ ಗುರುವಾರ ಸಂಜೆ ಜಗಳ ನಡೆದಿತ್ತು. ಈ ಸಂದರ್ಭದಲ್ಲಿ ಅಲಿ ಪತ್ನಿಯ ತಲೆಗೆ ದೊಣ್ಣೆಯಿಂದ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.

ಪತ್ನಿ ಸಾವನ್ನಪ್ಪಿದ ನಂತರ ಅಲಿ ತನ್ನ ಕುರ್ತಾ ಬಳಸಿ ನೇಣುಬಿಗಿದುಕೊಂಡು ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಂಪತಿಗೆ ಗಂಡು ಮಗನೊಬ್ಬನಿದ್ದು, ಆತ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವುದಾಗಿ ಸ್ಥಳೀಯರು ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ. ಘಟನೆ ಬಗ್ಗೆ ನೆರೆಹೊರೆಯವರು ಪೊಲೀಸರಿಗೆ ದೂರವಾಣಿ ಕರೆ ಮಾಡಿ ತಿಳಿಸಿರುವುದಾಗಿ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next