Advertisement

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

12:59 AM May 28, 2024 | Team Udayavani |

ತಿರುವನಂತಪುರ: ಕೇರಳದಲ್ಲಿ ನಡೆದಿದೆ ಎನ್ನಲಾಗಿರುವ ಮದ್ಯ ಹಗರಣದಲ್ಲಿ ದಿಲ್ಲಿ ಮಾದರಿಯನ್ನೇ ಅಳವಡಿಸಿ ಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ವಿ. ಮುರಳೀಧರನ್‌ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕೇರಳದ ಮದ್ಯ ನೀತಿ ಬದಲಾವಣೆಗೆ ಸಂಬಂಧಿಸಿದಂತೆ ಸೋರಿಕೆಯಾಗಿರುವ ಆಡಿಯೋ ಟೇಪ್‌ಗ್ಳು ರಾಜ್ಯ ಸರಕಾರದ ಭ್ರಷ್ಟಾಚಾರವನ್ನು ಬಹಿರಂಗಪಡಿಸುತ್ತದೆ.

Advertisement

ಇದೇ ಮಾದರಿಯನ್ನು ದಿಲ್ಲಿಯಲ್ಲಿ ಅರವಿಂದ ಕೇಜ್ರಿವಾಲ್‌ ಅಳವಡಿಸಿಕೊಂಡಿದ್ದರು. ಇಲ್ಲೂ ಅಬ ಕಾರಿ ನೀತಿಯಲ್ಲಿ ಕೆಲವು ಬದಲಾವಣೆ ಗಳನ್ನು ತರಲು ಬಾರ್‌ ಮಾಲಕರಿಂದ ಲಂಚ ಕೇಳಲಾಗಿದೆ. ರಾಜ್ಯ ಸರಕಾರಕ್ಕೆ ಈ ವಿಚಾರದಲ್ಲಿ ಮುಚ್ಚಿಡಲು ಏನೂ ಇಲ್ಲದಿದ್ದರೆ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಿ ಎಂದು ಆಗ್ರಹಿಸಿದ್ದಾರೆ.

ಹಣ ವಸೂಲಿಗೆ ಸಭೆ: ಕಾಂಗ್ರೆಸ್‌
ಅಬಕಾರಿ ನೀತಿಯಲ್ಲಿ ಬದಲಾವಣೆ ತರಲು ಬಾರ್‌ ಮಾಲಕರಿಂದ ಲಂಚ ಪಡೆದುಕೊಳ್ಳುವುದಕ್ಕಾಗಿ ರಾಜ್ಯ ಸರಕಾರ ಸಭೆ ನಡೆಸಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಸೋರಿಕೆಯಾಗಿರುವ ಬಾರ್‌ ಮಾಲಕರ ಆಡಿಯೋ ಸಹ ಇದನ್ನೇ ಸ್ಪಷ್ಟ ಪಡಿಸುತ್ತಿದೆ ಎಂದು ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next