Advertisement

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

01:01 PM May 18, 2021 | Team Udayavani |

ಹೊಸದಿಲ್ಲಿ: ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂ. ನೀಡುವುದಾಗಿ ದಿಲ್ಲಿ ಪೊಲೀಸರು ಘೋಷಿಸಿದ್ದಾರೆ. ಕುಸ್ತಿಪಟುವೋರ್ವನ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಹೆಸರು ಕೇಳಿಬಂದಿದೆ. ಇದೀಗ ಸುಶೀಲ್ ಕುಮಾರ್ ತಲೆ ಮರೆಸಿಕೊಂಡಿದ್ದಾರೆ.

Advertisement

ಇತ್ತೀಚೆಗಷ್ಟೇ ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ಹೋಗಿ ನಡೆದ ಮಾರಾಮಾರಿಯಲ್ಲಿ ಹಲವರು ಗಾಯಗೊಂಡಿದ್ದು, ಯುವ ರಸ್ಲರ್ ಒಬ್ಬ ಸಾವನ್ನಪ್ಪಿದ್ದ. ಇದರ ಹಿಂದೆ ಸುಶೀಲ್ ಕುಮಾರ್ ಹಾಗೂ ಅಜಯ್ ಕುಮಾರ್ ಎಂಬುವವರ ಕೈವಾಡವಿದೆ ಎಂದು ಆರೋಪಿಸಲಾಗಿದ್ದು, ಅಂದಿನಿಂದಲೂ ಇಬ್ಬರೂ ನಾಪತ್ತೆಯಾಗಿದ್ದಾರೆ.

ಇದನ್ನೂ ಓದಿ:

ಈಗಾಗಲೇ ಸುಶೀಲ್ ಕುಮಾರ್ ಗೆ ಜಾಮೀನು ರಹಿತ ವಾರೆಂಟ್ ಅನ್ನು ದೆಹಲಿ ಹೈಕೋರ್ಟ್ ಹೊರಡಿಸಿದೆ. ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂ. ಮತ್ತು ಅಜಯ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 50 ಸಾವಿರ ನೀಡುವುದಾಗಿ ದಿಲ್ಲಿ ಪೊಲೀಸರು ಘೋಷಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next