Advertisement

ದೆಹಲಿ;ಸಿಎಎ ವಿರೋಧಿ ಹಿಂಸಾಚಾರ-ಸಾವಿನ ಸಂಖ್ಯೆ 10ಕ್ಕೆ ಏರಿಕೆ; ಪರಿಸ್ಥಿತಿ ನಿಯಂತ್ರಣದಲ್ಲಿ

10:12 AM Feb 26, 2020 | Nagendra Trasi |

ನವದೆಹಲಿ; ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಹೋರಾಟ ಹಿಂಸಾರೂಪಕ್ಕೆ ತಿರುಗಿದ್ದ ಪರಿಣಾಮ ಘಟನೆಯಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ ಹತ್ತಕ್ಕೆ ಏರಿದೆ. ಸುಮಾರು 156 ಮಂದಿ ಪೊಲೀಸರು ಗಾಯಗೊಂಡಿದ್ದಾರೆ.

Advertisement

ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬೆಂಕಿ ಹಚ್ಚಿದ ಪ್ರಕರಣದ ಸಂಬಂಧ 11 ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು.

ಪರಿಸ್ಥಿತಿಯನ್ನು ಅಲಲೋಕಿಸಲು ಡ್ರೋಣ್ ಬಳಸಿಕೊಂಡಿದ್ದು, ಸಮಾಜಘಾತುಕ ಶಕ್ತಿಗಳಿಗೆ ಕಠಿಣ ಕ್ರಮದ ಎಚ್ಚರಿಕೆಯ ಸಂದೇಶವನ್ನು ದಿಲ್ಲಿ ಪೊಲೀಸ್ ಪಿಆರ್ ಒ ಎಂಎಸ್ ರಾನ್ ಧಾವ್ ತಿಳಿಸಿದ್ದಾರೆ.

ಹಿಂಸಾಚಾರದಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಹಾಗೂ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಯಾರೂ ಕೂಡಾ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next