Advertisement

ದೆಹಲಿ ಗಲಭೆ ಹಿಂದೆ ಕಾಂಗ್ರೆಸ್ ಮಾಸ್ಟರ್ ಮೈಂಡ್ : ಕಟೀಲ್ ಆರೋಪ

11:08 AM Feb 27, 2020 | sudhir |

ಬೆಳಗಾವಿ : ದೆಹಲಿಯಲ್ಲಿ ನಡೆಯುತ್ತಿರುವ ಗಲಭೆಯ ಹಿಂದೆ ಕಾಂಗ್ರೆಸ್ ಷಡ್ಯಂತ್ರ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

Advertisement

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್ ಅಮೇರಿಕಾ ಅಧ್ಯಕ್ಷ ಟ್ರಂಪ್ ದೆಹಲಿಗೆ ಬರುವ ಸಂದರ್ಭ ಅರಿತು ಕಾಂಗ್ರೆಸ್ ಷಡ್ಯಂತ್ರ ಮಾಡಿ ಗಲಭೆಯನ್ನು ಸೃಷ್ಟಿಸಿದೆ ಎಂದು ಟೀಕಿಸಿದ್ದಾರೆ.

ಕಳೆದ ಮೂರು ತಿಂಗಳಿಂದ ಶಾಂತಿಯುತವಾಗಿ ನಡೆಯುತಿದ್ದ ಪ್ರತಿಭಟನೆ ಈ ಎರಡು ದಿನದಲ್ಲಿ ಹಿಂಸಾ ರೂಪಕ್ಕೆ ಏಕೆ ತಿರುಗಿತು ಪ್ರತಿಭಟನಾಕಾರರ ಕೈಯಲ್ಲಿ ಪಿಸ್ತೂಲ್ ಎಲ್ಲಿಂದ ಬಂತು ಇದೆಲ್ಲದರ ಹಿಂದೆ ಕಾಂಗ್ರೆಸ್ ಮಾಸ್ಟರ್ ಮೈಂಡ್ ಅಡಗಿದೆ ಎಂದರು .

ಅಧಿಕಾರ ಇಲ್ಲದಿದ್ದಾಗ ಈ ದೇಶದಲ್ಲಿ ಕಾಂಗ್ರೆಸ್ ಗಲಭೆ ಸೃಷ್ಟಿಸೋದನ್ನ ಕಂಡಿದ್ದೇವೆ ಅರಾಜಕತೆ, ಅಶಾಂತಿ ನಿರ್ಮಾಣ ಮಾಡಿ ಮೋದಿ ಹೆಸರಿಗೆ ಕಳಂಕ ತರಲು ಕಾಂಗ್ರೆಸ್ ಷಡ್ಯಂತ್ರ ನಡೆಸಿದೆ.

ದೆಹಲಿ ಚುನಾವಣೆಯಲ್ಲಿ ಶೇಕಡಾ 4ರಷ್ಟು ಮತ ಪಡೆಯಲು ಕಾಂಗ್ರೆಸ್ ವಿಫಲವಾಗಿದ್ದು ಬೌದ್ಧಿಕ ದಿವಾಳಿಯಾಗಿದೆ.

Advertisement

ಈಗ ಕಾಂಗ್ರೆಸ್ ಓಟ್ ಬ್ಯಾಂಕ್ ಹಿಂದೆ ಬಿದ್ದು ಚಿಲ್ಲರೆ ರಾಜಕಾರಣ ಮಾಡುತ್ತಿದೆ, ವಂಶಾಡಳಿತದಿಂದ ಕಾಂಗ್ರೆಸ್ ಇನ್ನೂ ಹೊರಬರಲಿಲ್ಲ,

ಹಳ್ಳಿ ಹಳ್ಳಿಗಳಲ್ಲಿಯೂ ಕಾಂಗ್ರೆಸ್ ತನ್ನ ಶಕ್ತಿ ಕಳೆದುಕೊಂಡಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next