Advertisement

ದಿಲ್ಲಿಯವರಿಗೇ ಆಸ್ಪತ್ರೆ ಮೀಸಲು ; ಸೋಂಕಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಈ ಕ್ರಮ

08:45 AM Jun 08, 2020 | mahesh |

ಹೊಸದಿಲ್ಲಿ: ದಿಲ್ಲಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಮೊದಲು ಸ್ಥಳೀಯರಿಗೆ ಚಿಕಿತ್ಸೆಗೆ ಆದ್ಯತೆ ನೀಡಬೇಕು. ಹೀಗೆಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ರವಿವಾರ ತಿಳಿಸಿದ್ದಾರೆ. ಇದರ ಜತೆಗೆ ಇತರ ರಾಜ್ಯಗಳ ಜತೆಗೆ ಹೊಂದಿಕೊಂಡು ಇರುವ ಗಡಿಯನ್ನು ಸೋಮ ವಾರದಿಂದ ತೆರೆಯಲಿರುವುದಾಗಿ ಕೇಜ್ರಿವಾಲ್‌ ಆನ್‌ಲೈನ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement

ಸೋಂಕಿನ ಸ್ಥಿತಿ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಭಾರಿ ಪ್ರಮಾಣದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಶೇ.90ರಷ್ಟು ಮಂದಿ ದಿಲ್ಲಿಯ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ದಿಲ್ಲಿ ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಮೊದಲು ರಾಜಧಾನಿಯ ವ್ಯಾಪ್ತಿಯಲ್ಲಿ ವಾಸಿಸುತ್ತಿರುವವರಿಗೇ ಚಿಕಿತ್ಸೆ ಆದ್ಯತೆ ನೀಡಬೇಕು ಎಂದಿದ್ದಾರೆ ಸಿಎಂ ಕೇಜ್ರಿವಾಲ್‌. ದಿಲ್ಲಿ ಸರಕಾರಿ ಆಸ್ಪತ್ರೆಗಳ ವ್ಯಾಪ್ತಿಯಲ್ಲಿ 10 ಸಾವಿರ ಹಾಸಿಗೆಗಳ ಸಾಮರ್ಥ್ಯವಿದೆ. ಸೋಮವಾರದಿಂದ ದಿಲ್ಲಿ ಇತರ ರಾಜ್ಯಗಳ ಜತೆಗೆ ಹೊಂದಿರುವ ಗಡಿಯನ್ನೂ ತೆರವು ಗೊಳಿಸುವುದಾಗಿ ಮುಖ್ಯಮಂತ್ರಿ ಪ್ರಕಟಿಸಿದ್ದಾರೆ.

ವಿಶೇಷ ಶುಲ್ಕ ವಾಪಸ್‌; ಮದ್ಯಕ್ಕೆ ವ್ಯಾಟ್‌ ಹೆಚ್ಚಳ ಮದ್ಯದ ಮೇಲೆ ದಿಲ್ಲಿ ಸರಕಾರ ವಿಧಿಸಿದ್ದ ಶೇ.70ರಷ್ಟು “ಕೋವಿಡ್ ವಿಶೇಷ ಶುಲ್ಕ’ ವಾಪಸ್‌ ಪಡೆದಿದೆ. ಆದರೆ ವ್ಯಾಟ್‌ ಪ್ರಮಾಣವನ್ನು ಶೇ.20-ಶೇ.25ರಷ್ಟು ಏರಿಕೆ ಮಾಡಿದೆ. ಹೀಗಾದರೂ, ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ “ಗುಂಡಿ’ನ ಬೆಲೆ ಕಡಿಮೆಯಾಗಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next