Advertisement

ಸರ್ಕಾರದ ಸಾಧನೆ ಜನರಿಗೆ ತಲುಪಿಸಿ: ಚಂದ್ರಪ್ಪ

06:40 PM Sep 13, 2020 | Suhan S |

ಹೊಳಲ್ಕೆರೆ: ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಪಕ್ಷದ ನೇತೃತ್ವದ ಸರಕಾರಗಳ ಸಾಧನೆಗಳು, ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯ ಮತ್ತು ಸರಕಾರಿ ಸೌಲಭ್ಯಗಳ ಮಾಹಿತಿಯನ್ನು ಪ್ರತಿಯೊಬ್ಬ ನಾಗರಿಕರಿಗೂ ತಿಳಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ರಾಜ್ಯ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಎಂ. ಚಂದ್ರಪ್ಪ ಕರೆ ನೀಡಿದರು.

Advertisement

ಪಟ್ಟಣದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಿಜೆಪಿ ಪಕ್ಷದಲ್ಲಿ ದುಡಿಯುವ ಪ್ರತಿಯೊಬ್ಬ ಕಾರ್ಯಕರ್ತರಿಗೂಒಂದಿಲ್ಲೊಂದು ಅಧಿಕಾರ ಸಿಗಲಿದೆ. ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಪಡೆದುಕೊಂಡವರು ವಿಜಿಟಿಂಗ್‌ ಕಾರ್ಡ್‌ಗೆ ಮಾತ್ರಸೀಮಿತವಾಗದೆ ಪಕ್ಷದ ಸಿದ್ಧಾಂತಗಳನ್ನು ಪ್ರಸಾರ ಮಾಡಬೇಕು. ದೇಶವನ್ನು ವಿಶ್ವದ ನಾಯಕನ್ನಾಗಿ ಮಾಡಲು ಬಿಜೆಪಿ ಕೈಗೊಂಡಕಾರ್ಯಕ್ರಮYಳು, ವಿದೇಶಿ ನೀತಿ, ರಾಜ್ಯ ಸರಕಾರದ ಜನಪರ ಯೋಜನೆಗಳು ಹಾಗೂಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಬೇಕೆಂದರು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್‌. ನವೀನ್‌ ಮಾತನಾಡಿ,ಕೋವಿಡ್ ಮಧ್ಯೆಯೇ ನಾವೆಲ್ಲರೂ ಬದುಕು ಕಟ್ಟಿಕೊಳ್ಳಬೇಕು. ಬದುಕಿನ ನಡುವೆ ಪಕ್ಷವನ್ನು ಕಟ್ಟುವ ಕೆಲಸವೂ ಆಗಬೇಕು. ಸಂಘಟನೆಯಿಂದ ಮಾತ್ರ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಧ್ಯ ಎಂದು ತಿಳಿಸಿದರು.

ಜಿಲ್ಲಾಧ್ಯಕ್ಷ ಎ. ಮುರಳಿ, ವಲಯ ಪ್ರಭಾರಿ ಜಿ.ಎಂ. ಸುರೇಶ್‌ ಮಾತನಾಡಿದರು. ತಾಲೂಕು ಅಧ್ಯಕ್ಷ ಎಂ.ಬಿ. ಸಿದ್ದೇಶ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್‌ ಸಿದ್ದಾಪುರ, ಜಯಪಾಲ್‌, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್‌, ರೂಪಾ ಸುರೇಶ್‌, ಜಿಪಂ ಸದಸ್ಯ ಎಂ.ಬಿ.ತಿಪ್ಪೇಸ್ವಾಮಿ, ಕೆ.ಸಿ. ರಮೇಶ್‌, ಡಿ.ಸಿ. ಮೋಹನ್‌, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next