Advertisement

ಸರ್ಕಾರಿ ಯೋಜನೆ ಮನೆಗಳಿಗೆ ತಲುಪಿಸಿ

12:13 PM Nov 18, 2021 | Team Udayavani |

ಜೇವರ್ಗಿ: ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಪ್ರತಿ ಮನೆಗಳಿಗೂ ತಲುಪಿಸುವ ಮಹತ್ತರವಾದ ಜವಾಬ್ದಾರಿ ಬಿಜೆಪಿ ಕಾರ್ಯಕರ್ತರ ಮೇಲಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾದ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಹೇಳಿದರು.

Advertisement

ಪಟ್ಟಣದ ಮಹಿಬೂಬ್‌ ಫಂಕ್ಷನ್‌ ಹಾಲ್‌ನಲ್ಲಿ ಜೇವರ್ಗಿ ಬಿಜೆಪಿ ಮಂಡಲ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಬಲವರ್ಧನೆಗೆ ಕಾರ್ಯಕರ್ತರೇ ಜೀವಾಳ ಎಂದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ದಿನ- ದಲಿತರು, ಬಡವರು, ಹಿಂದುಳಿದ ವರ್ಗದವರು ಸೇರಿದಂತೆ ಜನಪರ, ರೈತಪರ ‌ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನಾನುರಾಗಿ ಸರ್ಕಾರವಾಗಿ ಹೊರಹೊಮ್ಮಿದೆ ಎಂದು ಹೇಳಿದರು.

ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಹಿಂದುಳಿದ ವರ್ಗಗಳ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶೋಭಾ ಬಾಣಿ, ಬಿಜೆಪಿ ಮಂಡಲ ಅಧ್ಯಕ್ಷ ಭೀಮರಾವ್‌ ಗುಜಗೂಂಡ, ಮಲ್ಲಿನಾಥಗೌಡ ಪಾಟೀಲ ಯಲಗೋಡ, ರಮೇಶಬಾಬು ವಕೀಲ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಹಳ್ಳೆಪ್ಪಚಾರ್ಯ ಜೋಶಿ, ಧರ್ಮಣ್ಣ ಇಟಗಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಶೋಕ ಸಾಹು ಗೋಗಿ, ಕಲಬುರಗಿ ವಿಭಾಗದ ಸಂಘಟನಾ ಕಾರ್ಯದರ್ಶಿ ಅರುಣ ಬಿನ್ನಾಡಿ ಹಾಗೂ ಮುಖಂಡರು, ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next