Advertisement

ಜುರಾಲಾ ಯೋಜನೆ ಸಂತ್ರಸ್ತರಿಗೆ ಪರಿಹಾರ ನೀಡಲು ಆಗ್ರಹ

07:05 PM Aug 06, 2022 | Team Udayavani |

ರಾಯಚೂರು: ತೆಲಂಗಾಣ ರಾಜ್ಯಕ್ಕೆ ಸಂಬಂಧಿಸಿದ ಜುರಾಲಾ ಹಿನ್ನೀರಿನಿಂದ ಸಂತ್ರಸ್ತರಾದ ತಾಲೂಕಿನ ಬೂರ್ದಿಪಾಡ ಗ್ರಾಮಸ್ಥರಲ್ಲಿ ಅನೇಕರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಗ್ರಾಮಸ್ಥರು ಶುಕ್ರವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Advertisement

ಈ ಕುರಿತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ, ಜುರಾಲಾ ಹಿನ್ನೀರಿನಿಂದ ಬೂರ್ದಿಪಾಡ ಗ್ರಾಮಕ್ಕೆ ಜಲಕಂಟಕ ಎದುರಾಗಿದೆ. ಗ್ರಾಮ ಹಿನ್ನೀರಿನಲ್ಲಿ ಮುಳುಗಡೆ ವ್ಯಾಪ್ತಿಗೆ ಒಳಪಡಲಿದೆ. ಅಲ್ಲಿಂದ ಜನರನ್ನು ಸ್ಥಳಾಂತರಿಸಲು ಮುಂದಾದ ಜಿಲ್ಲಾಡಳಿತ ಕೆಲವರಿಗೆ ಮಾತ್ರ ಪರಿಹಾರ ನೀಡಿದೆ. ಇದರಿಂದ ಸಾಕಷ್ಟು ಜನ ಗ್ರಾಮದಲ್ಲೇ ಉಳಿಯುವಂತಾಗಿದೆ. ಸರ್ಕಾರ ಮತ್ತೂಮ್ಮೆ ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ಸಂತ್ರಸ್ತರು, ಗ್ರಾಮದ ಹೆಣ್ಣು ಮಕ್ಕಳು ಸೇರಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಅಂದಿನ ಸರ್ಕಾರ ಗ್ರಾಮದ ಅರ್ಧ ಜನರನ್ನು ಊರು ಬಿಡಿಸಿ ಸ್ಥಳಾಂತರಿಸಿತ್ತು. ಇನ್ನೂ ಅರ್ಧ ಜನರಿಗೆ ಪರಿಹಾರವನ್ನೇ ನೀಡಿಲ್ಲ. ಈ ಬಗ್ಗೆ ಅನೇಕ ಬಾರಿ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿಗಳು ಈ ಕೂಡಲೇ ಮತ್ತೂಮ್ಮೆ ವಿಚಾರಣೆ ನಡೆಸಿ ಅರ್ಹರಿಗೆ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಏನಾದರೂ ಅನಾಹುತಗಳು ಸಂಭವಿಸಿದರೆ ಜಿಲ್ಲಾಡಳಿತವೇ ನೇರ ಹೊಣೆಯಾಗಲಿದೆ ಎಂದು ಎಚ್ಚರಿಸಿದರು.

ಸಂಘದ ಮುಖಂಡರಾದ ನರಸರೆಡ್ಡಿ, ಈ.ಜನಾರ್ದನ ರೆಡ್ಡಿ, ಸೇರಿದಂತೆ ಅನೇಕ ಮುಖಂಡರು, ಗ್ರಾಮಸ್ಥರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next