Advertisement

ಬೆಳಗಾವಿ ಜಿಲ್ಲೆ ವಿಭಜನೆ ಬೇಡಿಕೆ; ಜಿಲ್ಲೆಯ ಹಿತಕ್ಕೆ ಅನುಸಾರವಾಗಿ ಕ್ರಮ: ಸಿಎಂ

06:41 PM Apr 28, 2022 | Team Udayavani |

ಬೆಳಗಾವಿ: ಕರ್ನಾಟಕ ಮತ್ತು ಬೆಳಗಾವಿ ಜಿಲ್ಲೆಯ ಹಿತರಕ್ಷಣೆಗೆ ಅಗತ್ಯವಿರುವ ಕ್ರಮ ಕೈಗೊಳ್ಳಲಾಗುವುದು, ಅದರ ಜತೆ ಜಿಲ್ಲೆಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿ ಜಿಲ್ಲೆಯ ವಿಭಜನೆಗೆ ಹಲವಾರು ವರ್ಷಗಳಿಂದ ಬೇಡಿಕೆ ಇದೆ. ಬೇರೆ ಎಲ್ಲಾ ಜಿಲ್ಲೆಗಳು ಆದಾಗಲೂ ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು ಎನ್ನುವ ಸಲಹೆ ಬೇಡಿಕೆ ಬಂದಿತ್ತು. ಅವತ್ತಿನ ಸಂದರ್ಭದಲ್ಲಿ ಜೆ.ಹೆಚ್.ಪಟೇಲರು ಮುಖ್ಯಮಂತ್ರಿಗಳಾಗಿದ್ದಾಗಲೂ ಚರ್ಚೆಯಾಗಿತ್ತು ಎಂದರು.

ಬೆಳಗಾವಿ ಗಡಿ ಜಿಲ್ಲೆಯಾದ್ದರಿಂದ ಸದ್ಯಕ್ಕೆ ಬೇಡ ಎಂಬ ನಿರ್ಧಾರ ಮಾಡಲಾಗಿತ್ತು. ಈಗ ಮತ್ತೆ ಜನರು ಅದರ ಬಗ್ಗೆ ಒತ್ತಾಸೆ ವ್ಯಕ್ತಪಡಿಸುತ್ತಿದ್ದಾರೆ. ಅವನ್ನೆಲ್ಲಾ ಗಮನಿಸಿ ಜಿಲ್ಲೆಯ ಹಿತದೃಷ್ಟಿಯಿಂದ ಏನು ಬೇಕೋ ಅದನ್ನು ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next