Advertisement

ಸಂತ್ರಸ್ತರಿಗೆ ನ್ಯಾಯ ದೊರಕಿಸಲು ಆಗ್ರಹ

12:48 PM Feb 12, 2020 | Team Udayavani |

ಗೋಕಾಕ: ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸರ್ವೇ ಕಾರ್ಯದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂತ್ರಸ್ತರಿಗೆ ಅನ್ಯಾಯವಾಗಿದ್ದು, ಅದನ್ನು ಸರಿಪಡಿಸುವಂತೆ ಆಗ್ರಹಿಸಿ ಮೆಳವಂಕಿ ಗ್ರಾಮದ ನೆರೆ ಸಂತ್ರಸ್ತರು ಹಾಗೂ ಮುಖಂಡರು ಮಂಗಳವಾರ ತಹಶೀಲ್ದಾರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

Advertisement

ನಿಜವಾದ ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲ. ಕಳೆದ 6 ತಿಂಗಳಿನಿಂದ ತಹಶೀಲ್ದಾರ ಕಚೇರಿಗೆ ಮನವಿ ಮಾಡಿದರೂ ತಹಶೀಲ್ದಾರ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರಿಪಡಿಸಲು ಹೇಳಿದರೂ ತಹಶೀಲ್ದಾರ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಎ ವರ್ಗದ 78, ಬಿ ವರ್ಗದ 205, ಸಿ ವರ್ಗದ 305 ಸಂತ್ರಸ್ತರಿಗೆ ಸಂಪೂರ್ಣ ಪರಿಹಾರ ನೀಡಲಾಗಿಲ್ಲ. ಸರ್ವೇ ಸಮಯದಲ್ಲಿ ಆಯ್ಕೆಗೊಂಡ 189 ಫಲಾನುಭವಿಗಳನ್ನು ರದ್ದುಪಡಿಸಿದ್ದು, ಅವುಗಳನ್ನು ಸಿ ವರ್ಗದಿಂದ ಎ ವರ್ಗಕ್ಕೆ ಸೇರಿಸುತ್ತೇವೆ ಎಂದು ಹೇಳಿದ ಅಧಿಕಾರಿಗಳು ಈಗ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಈ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ, ಕಂದಾಯ ಸಚಿವ ಆರ್‌.ಅಶೋಕ, ನೀರಾವರಿ ಸಚಿವ ರಮೇಶ ಜಾರಕಿಹೊಳಿ, ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಒತ್ತಾಯಿಸಲಾಗುವುದು ಎಂದು ಸಂತ್ರಸ್ತರು ಹಾಗೂ ಮುಖಂಡರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಡಾ. ರಾಜೇಂದ್ರ ಸಣ್ಣಕ್ಕಿ, ಬಸನಗೌಡ ಪಾಟೀಲ, ಸತ್ತೆಪ್ಪ ಬಬಲಿ, ಬಿ.ಬಿ.ಬೀರನಗಡ್ಡಿ, ರಾಮಪ್ಪಾ ಕಾಪಶಿ, ಅಪ್ಪಯ್ಯ ಅಗ್ನೆಪ್ಪನವರ, ಭೀಮಪ್ಪ ಚಿಪ್ಪಲಕಟ್ಟಿ, ಮಹಾದೇವಪ್ಪ ಪತ್ತಾರ ಸೇರಿದಂತೆ ಅನೇಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next