Advertisement

ರೈತರ ಅನುಕೂಲಕ್ಕೆ ರೈಲು ಸೇವೆ ಆರಂಭಿಸಲು ಆಗ್ರಹ

06:23 AM Feb 17, 2019 | Team Udayavani |

ಬೆಂಗಳೂರು: ಕೋಲಾರ, ಚಿಕ್ಕಬಳ್ಳಾಪುರ ಸುತ್ತಲಿನ ರೈತರು ಮತ್ತು ಇತರ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ದೆಹಲಿ, ಚೆನ್ನೈ ಮತ್ತು ಮುಂಬೈಗೆ ರೈಲು ಸೇವೆ ಆರಂಭಿಸಬೇಕು ಎಂದು ಸಂಸದ ಹಾಗೂ ಕೇಂದ್ರ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಆಗ್ರಹಿಸಿದರು. 

Advertisement

ಯಶವಂತಪುರ ರೈಲು ನಿಲ್ದಾಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಂಗಾರಪೇಟೆ-ಮಾರಿಕುಪ್ಪಂ ಮತ್ತು ಚಿಕ್ಕಬಳ್ಳಾಪುರ-ಕೋಲಾರ ನಡುವೆ ನಿರ್ಮಿಸಲಾದ ರೈಲ್ವೆ ಕೆಳಸೇತುವೆಗಳ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸುತ್ತಲಿನ ರೈತರು ಅತಿ ಹೆಚ್ಚು ಪ್ರಮಾಣದಲ್ಲಿ ತರಕಾರಿ, ಹಣ್ಣುಗಳನ್ನು ಬೆಳೆಯುತ್ತಾರೆ.

ಆ ಉತ್ಪನ್ನಗಳು ದೇಶದ ನಾನಾ ಭಾಗಗಳಿಗೆ ಹೋಗುತ್ತವೆ ಹೀಗಾಗಿ, ಬೆಂಗಳೂರು-ದೇವನಹಳ್ಳಿ- ಚಿಕ್ಕಬಳ್ಳಾಪುರ-ಶಿಡ್ಲಘಟ್ಟ- ಚಿಂತಾಮಣಿ-ಶ್ರೀನಿವಾಸಪುರ- ಕೋಲಾರ-ಬಂಗಾರಪೇಟೆ- ತಿರುಪತಿ ಮಾರ್ಗವಾಗಿ ದೆಹಲಿ, ಚೆನ್ನೈ ಹಾಗೂ ಮುಂಬೈಗೆ ರೈಲು ಸಂಪರ್ಕ ಕಲ್ಪಿಸಬೇಕು.

ಇದರಿಂದ ಬೆಳೆಗಾರರ ಶೇ.80ರಷ್ಟು ಸಾರಿಗೆ ವೆಚ್ಚ ಹಾಗೂ ಸಮಯ ಉಳಿತಾಯ ಆಗುವುದರ ಜತೆಗೆ ವಾಯುಮಾಲಿನ್ಯ ಕೂಡ ಕಡಿಮೆ ಆಗಲಿದೆ ಎಂದು ಹೇಳಿದರು. ಇದಕ್ಕೂ ಮುನ್ನ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಸಂಸದ ಪಿ.ಸಿ.ಮೋಹನ್‌, ಶಾಸಕ ಎಸ್‌.ಸುಧಾಕರ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next