Advertisement

ಪಠ್ಯಪುಸ್ತಕ ಪರಿಷ್ಕರಣೆ ಗೊಂದಲ ನಿವಾರಿಸಲು ಆಗ್ರಹ

06:15 PM Jul 11, 2022 | Team Udayavani |

ಚಿಕ್ಕಬಳ್ಳಾಪುರ: ಪಠ್ಯಪುಸ್ತಕ ಪರಿಷ್ಕರಣೆ ಗೊಂದಲ ನಿವಾರಣೆ, ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಬೇಕೆಂದು ಆಗ್ರಹಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ನಗರದಲ್ಲಿ ಕನ್ನಡ ಬಾವುಟದೊಂದಿಗೆ ಪ್ರತಿಭಟನೆ ನಡೆಸಿದರು.

Advertisement

ನಗರದ ವಿದ್ಯಾರ್ಥಿನಿಲಯದಿಂದ ಶಿಡ್ಲಘಟ್ಟದ ವೃತ್ತದವರೆಗೆ ಕನ್ನಡ ಬಾವುಟದೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರು, ರಾಜ್ಯ ಸರ್ಕಾರ ಪಠ್ಯಪುಸ್ತಕ ಗೊಂದಲ ನಿವಾರಿಸಿ, ಹಳೇ ಪುಸ್ತಕಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಮತ್ತು ವಿದ್ಯಾರ್ಥಿಗಳಿಗೆ ಕೂಡಲೇ ಉಚಿತ ಬಸ್‌ಪಾಸ್‌ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಎನ್‌.ಎಸ್‌ .ಯು.ಐ ಸಂಘಟನೆಯ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್‌ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ, ಮಾನವೀಯ ಸಂದೇಶವನ್ನು ಇಡೀ ಜಗತ್ತಿನಲ್ಲಿ ಪಸರಿಸಲು ಕಾರಣಕರ್ತರಾದವರನ್ನು ಮೂಲೆಗುಂಪು ಮಾಡಿ ಅವಹೇಳನಾ ಮಾಡುವ ಕೆಲಸವನ್ನು ಪಠ್ಯಪುಸಕ್ತ ಪರಿಷ್ಕರಣಾ ಸಮಿತಿ ಮಾಡುತ್ತಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಉಗ್ರ ಹೋರಾಟ: ಜೊತೆಗೆ, ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸುವ ಬದಲಿಗೆ ಕೋಮುವಾದದ ಬೀಜವನ್ನು ಬಿತ್ತನೆ ಮಾಡಿ, ಮನಸ್ಸುಗಳನ್ನು ಕೆಡಿಸಿ, ಕೇಸರಿಕರಣ ಮಾಡಲು ಹೊರಟಿದೆ. ವಿದ್ಯಾರ್ಥಿಗಳಿಗೆ ನೈಜ ಸಂಗತಿಯನ್ನು ಮನವರಿಕೆ ಮಾಡಿಕೊಡಲು ಹೋರಾಟವನ್ನು ಆರಂಭಿಸಿದ್ದೇವೆ. ಪಠ್ಯಪುಸ್ತಕದ ಗೊಂದಲವನ್ನು ನಿವಾರಿಸದಿದ್ದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಶಾಂತಿಯುತ ಪ್ರತಿಭಟನೆ ಸಹಿಸುತ್ತಿಲ್ಲ: ನಾವು ಚಡ್ಡಿ ಸುಡಲು ಹೋದರೇ, ಮನೆಗೆ ನುಗ್ಗಿದ್ದೇವೆ ಎಂದು ಅಪವಾದ ಹೂರಿಸುವ ಕೆಲಸವನ್ನು ಮಾಡಿ ದ್ದಾರೆ. ಸಂವಿಧಾನಾತ್ಮಕವಾಗಿ ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಬಿಜೆಪಿ ನೇತೃತ್ವದ ಸರ್ಕಾರ ಸಹಿಸುತ್ತಿಲ್ಲ ಎಂದು ದೂರಿದರು.

Advertisement

ಮಾನವೀಯ ಸಂದೇಶ ನೀಡಿ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಭಗತ್‌ಸಿಂಗ್‌, ಮಾನವೀಯ ಸಂದೇಶವನ್ನು ನೀಡಿದರು. ಸಮಾಜವನ್ನು ಸುಧಾರಣೆ ಮಾಡಿದ ಬಸವಣ್ಣ, ಡಾ.ಬಿ.ಆರ್‌.ಅಂಬೇಡ್ಕರ್‌ ಹಾಗೂ ರಾಷ್ಟ್ರಕವಿ ಕುವೆಂಪು ಅವರಿಗೆ ಅವಹೇಳನೆ ಮಾಡುವುದನ್ನು ನಾವು ಯಾವ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದರು.

ಜನಜಾಗೃತಿ ಅಭಿಯಾನ: ನಿಜಾಂಶವನ್ನು ಇಡೀ ವಿದ್ಯಾರ್ಥಿ ಸಮುದಾಯಕ್ಕೆ ತಿಳಿಸುವ ಕೆಲಸವನ್ನು ಮಾಡುವ ಸಲುವಾಗಿ ಜನಜಾಗೃತಿ ಅಭಿಯಾನ ವನ್ನು ನಡೆಸುತ್ತಿದ್ದೇವೆ. ಜೊತೆಗೆ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಎನ್‌ಎಸ್‌ಯುಐ ಸದಾ ಬೆಂಬಲ ವ್ಯಕ್ತಪಡಿಸಿ ಹೋರಾಟ ನಡೆಸುತ್ತದೆ ಎಂದು ವಿವರಿಸಿದರು. ಎನ್‌ಎಸ್‌ಯುಐ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಯ್‌ಕುಮಾರ್‌, ರಾಜ್ಯ ಕಾರ್ಯದರ್ಶಿ ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ದಿನೇಯ್‌ ದೀಪಕ್‌, ಜಿಲ್ಲಾಧ್ಯಕ್ಷ ಚಂದ್ರಶೇಖರ್‌, ಉಪಾಧ್ಯಕ್ಷ ಪ್ರಸನ್ನಕುಮಾರ್‌, ಶಿವಾನಂದ, ಪ್ರಧಾನ ಕಾರ್ಯದರ್ಶಿ ಮದನ್‌ ಮೋಹನ್‌, ಮುರಳಿ, ಕಾಂಗ್ರೆಸ್‌ ಸಾಮಾಜಿಕ ಜಾಲಾತಾಣ ಜಿಲ್ಲಾಧ್ಯಕ್ಷ ಶಾಹಿದ್‌ ಅಬ್ಟಾಸ್‌, ಹಮೀಮ್‌, ನರಸಿಂಹಮೂರ್ತಿ, ಸಂತೋಷ, ಸಂಘಟನೆಯ ಜಿಲ್ಲಾ, ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next