Advertisement

Karnataka ಎನ್‌ಇಪಿ ಮುಂದುವರಿಸಲು ಆಗ್ರಹ: 1 ಕೋಟಿ ಸಹಿ ಸಂಗ್ರಹ ಅಭಿಯಾನ

11:13 PM Nov 12, 2023 | Team Udayavani |

ಮಂಗಳೂರು: ಕರ್ನಾಟಕದಲ್ಲಿ ಈಗಾಗಲೇ ಉನ್ನತ ಶಿಕ್ಷಣ ವಿಭಾಗದಲ್ಲಿ ಜಾರಿಯಲ್ಲಿರುವ ಎನ್‌ಇಪಿ-2020 ಅನ್ನು ಮುಂದುವರಿಸುವಂತೆ ಹಾಗೂ ಇನ್ನು ಮುಂದೆ ಶಾಲಾ ಶಿಕ್ಷಣದಲ್ಲಿ ಎನ್‌ಇಪಿ ಜಾರಿಗೊಳಿಸುವಂತೆ ಆಗ್ರಹಿಸಿ
ರಾಜ್ಯಾದ್ಯಂತ ಎಲ್ಲ ಶಾಲೆ, ಕಾಲೇಜು ಗಳ ವಿದ್ಯಾರ್ಥಿಗಳ ಹೆತ್ತವರ, ವಿದ್ಯಾರ್ಥಿಗಳ, ಶಿಕ್ಷಕರ ಮತ್ತು ಆಡಳಿತ ಮಂಡಳಿಯವರಿಂದ 1 ಕೋಟಿ ಸಹಿ ಸಂಗ್ರಹ ಮಾಡುವ ಅಭಿಯಾನ ನ. 15ರಿಂದ 30ರ ವರಗೆ ನಡೆಸಲು ವಿದ್ಯಾಭಾರತಿ ಕರ್ನಾಟಕದ ರಾಜ್ಯ ಕಾರ್ಯಕಾರಿಣಿಯು ನಿರ್ಣಯ ತೆಗೆದುಕೊಂಡಿದೆ.

Advertisement

ರಾಷ್ಟ್ರೀಯ ಶಿಕ್ಷಣ ನೀತಿ -2020 ಸ್ವತಂತ್ರ ಭಾರತದ 3ನೇ ರಾಷ್ಟ್ರೀಯ ಶಿಕ್ಷಣ ನೀತಿಯಾಗಿ ರೂಪುಗೊಂಡು ಇದೀಗ ದೇಶಾದ್ಯಂತ ಜಾರಿಯಾಗಿದೆ. ಪ್ರಜಾಸತ್ತಾತ್ಮಕ ವ್ಯವಸ್ಥೆಗಳ ಇತಿಹಾಸ ದಲ್ಲಿಯೇ ಇಷ್ಟೊಂದು ವ್ಯಾಪಕವಾಗಿ ಹಾಗೂ ಎಲ್ಲ ಸ್ತರಗಳಲ್ಲಿ ಚರ್ಚಿತವಾಗಿ ರೂಪು ತಳೆದ “ಸಾರ್ವಜನಿಕ ನೀತಿ’ ಬೇರಾವುದಿಲ್ಲ. ಈ ನೀತಿ ಸಿದ್ಧಗೊಳಿಸುವಲ್ಲಿ ದೇಶದ 2.5ಲಕ್ಷ ಗ್ರಾಮಗಳಲ್ಲಿ, 676 ಜಿಲ್ಲೆಗಳಲ್ಲಿ, 36 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಭೆ ನಡೆದು 2 ಲಕ್ಷಕ್ಕೂ ಅಧಿಕ ಸಲಹೆಗಳ ಸ್ವೀಕೃತಿಯೊಂದಿಗೆ ಅಂತಿಮ ರೂಪ ಪಡೆದಿದೆ.

ಕರ್ನಾಟಕದಲ್ಲಿ ಎನ್‌ಇಪಿ ಯನ್ನು ಮುಂದುವರಿಸುವಂತೆ ಆಗ್ರಹಿಸಿ ನಡೆಸಲಾಗುವ ಸಹಿ ಸಂಗ್ರಹ ಅಭಿಯಾನಕ್ಕೆ ರಾಜ್ಯದ ಶಿಕ್ಷಣ ಪ್ರೇಮಿಗಳು ವಿದ್ಯಾಭಾರತಿ ಕರ್ನಾಟಕದ ಜತೆ ಕೈ ಜೋಡಿಸುವುದರ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ದ.ಕ. ಜಿಲ್ಲಾಧ್ಯಕ್ಷ ಲೋಕಯ್ಯ ಡಿ. ಮತ್ತು ಜಿಲ್ಲಾ ಕಾರ್ಯದರ್ಶಿ ರಮೇಶ ಕೆ. ಪ್ರಕಟನೆ ಮೂಲಕ ಮನವಿ ಮಾಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next