Advertisement

ಲಂಚಕ್ಕೆ ಬೇಡಿಕೆ ಇಟ್ಟರೆ ಎಸಿಬಿಗೆ ದೂರು ನೀಡಿ

03:31 PM Oct 10, 2021 | Team Udayavani |

ಗೌರಿಬಿದನೂರು: ತಾಲೂಕು ಕಚೇರಿ ಸಭಾಂಗಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ ನಡೆಯಿತು. ಎಸಿಬಿ ಡಿವೈಎಸ್ಪಿ ಪ್ರವೀಣ್‌ ಮಾತನಾಡಿ, ಸಾರ್ವಜನಿಕರ ಕೆಲಸ ಮಾಡಿಕೊಡಲು ಸರ್ಕಾರಿ ನೌಕರರು ಅಥವಾ ಸಿಬ್ಬಂದಿ ವಿಳಂಬ ಮಾಡಬಾರದು.

Advertisement

ಸರ್ಕಾರ ನಿಗದಿಪಡಿಸಿದ ಶುಲ್ಕ ಹೂರತುಪಡಿಸಿ ಲಂಚಕ್ಕೆ ಅಥವಾ ವಸ್ತುವಿನ ರೂಪದ ಬೇಡಿಕೆಗಳನ್ನು ಇಟ್ಟರೆ ಅಂತಹವರ ಬಗ್ಗೆ ಎಸಿಬಿಗೆ ದೂರು ನೀಡಬಹುದು ಎಂದು ಹೇಳಿದರು. ಕೆಲಸಕ್ಕಾಗಿ ಅಧಿಕಾರಿಗಳು ಹಣ ಕೇಳಿದಲ್ಲಿ ಅಂತವರ ವಿರುದ್ಧ ಧೈರ್ಯದಿಂದ ದೂರು ನೀಡಬೇಕು. ದೂರುದಾರರ ಹೆಸರು, ಮಾಹಿತಿಯನ್ನು ಗೋಪ್ಯವಾಗಿ ಇಡಲಾಗುವುದು. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಭ್ರಷ್ಟಾಚಾರ ತಡೆಗಟ್ಟಿ ಸಾರ್ವಜನಿಕರಿಗೆ ಪಾರದರ್ಶಕ ಆಡಳಿತ ಒದಗಿಸಬೇಕು ಎಂಬ ಉದ್ದೇಶದಿಂದ ಭ್ರಷ್ಟಾಚಾರ ನಿಗ್ರಹ ದಳವನ್ನು ಸರ್ಕಾರ ಸ್ಥಾಪಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ;- ಕೆಟ್ಟು ನಿಂತ ಶುದ್ಧ ನೀರಿನ ಘಟಕ: ಸಾಂಕೇತಿಕ ಪ್ರತಿಭಟನೆ ನಡೆಸಿ ಗ್ರಾಮಸ್ಥರ ಅಕ್ರೋಶ

ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳು ಇದ್ದಲ್ಲಿ ಮತ್ತು ನೌಕರರು ಅಕ್ರಮ ಆಸ್ತಿ ಗಳಿಕೆ ಮಾಡಿದ್ದ ಬಗ್ಗೆ ಸೂಕ್ತ ದಾಖಲೆಗಳೊಂದಿಗೆ ದೂರು ನೀಡಬಹುದು ಎಂದು ಹೇಳಿದರು. ಬಳಿಕ ಸಭೆಯಲ್ಲಿ ಸಾರ್ವಜನಿಕರಿಂದ ಎರಡು ಅರ್ಜಿಗಳು ಸಲ್ಲಿಕೆಯಾದವು. ಎಸಿಬಿ ಅಧಿಕಾರಿ ರವಿಕುಮಾರ್‌, ಹರೀಶ್‌, ಶಿರಸ್ತೇದಾರ್‌ ರವಿಕುಮಾರ್‌, ಗ್ರೇಡ್‌-2 ತಹಶೀಲ್ದಾರ್‌ ವೆಂಕಟರಮಣರಾವ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next