Advertisement

ಪರಿಷ್ಕೃತ ವೇತನ ಬಿಡುಗಡೆಗೆ ಆಗ್ರಹಿಸಿ ಪೌರ ಕಾರ್ಮಿಕರಿಂದ ಪ್ರತಿಭಟನೆ

11:05 AM Apr 14, 2017 | Team Udayavani |

ಬೆಂಗಳೂರು: ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರಿಗೆ ಸರ್ಕಾರದಿಂದ ಹೆಚ್ಚಿಸಲಾಗಿರುವ ಪರಿಷ್ಕೃತ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. 

Advertisement

ಬಿಬಿಎಂಪಿ ಕೇಂದ್ರ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ನೂರಾರು ಪೌರಕಾರ್ಮಿಕರು ಬಿಬಿಎಂಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಜತೆಗೆ ಈ ಕೂಡಲೇ ಸರ್ಕಾರ ಹೆಚ್ಚಿಸಿದ ಕನಿಷ್ಠ ವೇತನ ಬಿಡುಗಡೆ ಮಾಡದಿದ್ದರೆ ಹೋರಾಟ ಮುಂದುವರಿಸುವ ಎಚ್ಚರಿಕೆ ನೀಡಿದರು. 

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎ.ಜೇಯರಿಮ್‌, ಸರ್ಕಾರ ಗುತ್ತಿಗೆ ಪೌರಕಾರ್ಮಿಕರಿಗೆ ವೇತನವನ್ನು ಪರಿಷ್ಕರಿಸಿ ಆರು ತಿಂಗಳು ಕಳೆದಿದೆ. 
ಆದರೆ, ಈವರೆಗೆ ಬಿಬಿಎಂಪಿ ಅಕಾರಿಗಳು ಪೌರಕಾರ್ಮಿಕರಿಗೆ ಪರಿಷ್ಕೃತ ವೇತನ ನೀಡಲು ಮುಂದಾಗುತ್ತಿಲ್ಲ.

ಇದರೊಂದಿಗೆ ಆಗಸ್ಟ್‌ ತಿಂಗಳಿಂದ ಪೌರಕಾರ್ಮಿಕರಿಗೆ ಪರಿಷ್ಕೃತ ಬಾಕಿ ವೇತನ ನೀಡಬೇಕಾಗಿದೆ. ಪಾಲಿಕೆಯಿಂದ ಶೀಘ್ರ ಪರಿಷ್ಕೃತ ವೇತನ ಮತ್ತು ಹಳೆಯ ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. 

Advertisement

Udayavani is now on Telegram. Click here to join our channel and stay updated with the latest news.

Next