Advertisement

ಬಿಜೆಪಿ ಸರ್ಕಾರ ವಜಾಗೊಳಿಸಲು ಆಗ್ರಹ

12:41 PM Nov 05, 2019 | Team Udayavani |

ಬಾಗಲಕೋಟೆ : ಬಿಜೆಪಿ ಸರ್ಕಾರವನ್ನು ವಜಾಗೊಳಿಸುವಂತೆ ಒತಾಯಿಸಿ ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ ವಿನಯ ತಿಮ್ಮಾಪುರ ಮಾತನಾಡಿ, ಸ್ಪಷ್ಟ ಬಹುಮತ ಇಲ್ಲದೇ ಪ್ರಜಾಪ್ರಭುತ್ವ ವಿರೋಧಿಯಾಗಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹಾಳು ಮಾಡುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈಚೆಗೆ ತಮ್ಮದೇ ಪಕ್ಷದ ಸಭೆಯಲ್ಲಿ, ಬಿಜೆಪಿ ಸರ್ಕಾರ ಹೇಗೆ ಅಧಿಕಾರಕ್ಕೆ ಬಂತು ಎಂಬುದನ್ನು ಹೇಳಿಕೊಂಡಿದ್ದಾರೆ.

ಕಾಂಗ್ರೆಸ್‌ ಶಾಸಕರನ್ನು ರಾಜೀನಾಮೆ ಕೊಡಿಸಿ, ಸರ್ಕಾರ ರಚನೆ ಮಾಡಿದ್ದಾರೆ. ಅವರು ಮಾತನಾಡಿದ ವೀಡಿಯೋ ಕೂಡ ಎಲ್ಲೆಡೆ ಹರಿದಾಡಿದೆ. ಹೀಗಾಗಿ ಪ್ರಜಾಪ್ರಭುತ್ವಕ್ಕೆ ಮಾರಕ ರೀತಿ ನಡೆದುಕೊಳ್ಳುತ್ತಿರುವ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು, ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಬೇಕು. ಕೇಂದ್ರದ ಗೃಹಸಚಿವ ಅಮಿತ್‌ ಶಾ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.ಯುವ ಕಾಂಗ್ರೆಸ್‌ ರಾಜ್ಯ ಕಾರ್ಯದರ್ಶಿ ಪ್ರವೀಣಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೆನ್ನು ಅಂಬಿ, ಆರೀಫ್‌ ಮೋಮಿನ, ಪ್ರಕಾಶ ಮಾಂಗ, ಆಕಾಶ ದೊಡಮನಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next