Advertisement

ತಿದ್ದುಪಡಿ ಕೈ ಬಿಡದಿದ್ದಲ್ಲಿ ಹೋರಾಟ

09:53 AM Jun 14, 2020 | Suhan S |

ಧಾರವಾಡ: ಸರಕಾರವು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಕೈ ಬಿಡದಿದ್ದಲ್ಲಿ ರೈತ ವಿರೋಧಿ  ಮತ್ತು ಭೂ ಮಾಫಿಯಾ ವಿರುದ್ಧ ಪಕ್ಷಾತೀತವಾಗಿ ಹೋರಾಟ ಕೈಗೊಳ್ಳಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಎಸ್‌.ಆರ್‌. ಹಿರೇಮಠ ಆಗ್ರಹಿಸಿದರು.

Advertisement

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಕಾಯ್ದೆಗೆ ತಿದ್ದುಪಡಿ ತರುವ ನಿರ್ಧಾರ ಮಾಡಿರುವುದು ರೈತರಿಗೆ ಮರಣ ಶಾಸನವಾಗಲಿದೆ. ಇದರಿಂದ ಸಿಎಂ ಯಡಿಯೂರಪ್ಪ ಅವರು ಇಳಿವಯಸ್ಸಿನಲ್ಲಿ ರೈತ ವಿರೋ ಧಿ ಪಟ್ಟ ಕಟ್ಟಿಕೊಂಡಂತಾಗುತ್ತದೆ. ಹೀಗಾಗಿ ಭೂ ಮಾಫಿಯಾಕ್ಕೆ ಅನುಕೂಲವಾಗುವ ಈ ತಿದ್ದುಪಡಿ ಕೈ ಬಿಡಬೇಕೆಂದು ಒತ್ತಾಯಿಸಿದರು. ರೈತ ಪರ ಹಸಿರು ಶಾಲು ಹಾಕಿಕೊಳ್ಳುವ ಸಿಎಂ ಬಿಎಸ್‌ವೈ, ಸಚಿವರಾದ ಆರ್‌.ಅಶೋಕ ಮತ್ತು ಜೆ.ಸಿ. ಮಾಧುಸ್ವಾಮಿಯಂತಹ ಪಟ್ಟಭದ್ರರನ್ನು ನಿಯಂತ್ರಿಸಬೇಕು. ಬಡ ರೈತರ ರಕ್ಷಣೆ ಮತ್ತು ಕೃಷಿ ಸಂಕಟ ವಿಕೋಪಕ್ಕೆ ಹೋಗದಂತೆ ಸರ್ಕಾರ ತನ್ನ ಹೊಣೆಗಾರಿಕೆ ನಿಭಾಯಿಸಬೇಕು ಎಂದರು.

ವಲಸೆ ಕಾರ್ಮಿಕರ ಬಗ್ಗೆ ನಿರ್ಲಕ್ಷ್ಯ ತೋರಿದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್‌ ನೀಡಿರುವ ಆದೇಶವನ್ನು ಸಿಟಿಜನ್‌ ಫಾರ್‌ ಡೆಮಾಕ್ರಸಿ, ಜನಾಂದೋಲನಗಳ ಮಹಾಮೈತ್ರಿ ಮತ್ತು ಜನಸಂಗ್ರಾಮ ಪರಿಷತ್‌ ಸ್ವಾಗತಿಸಿವೆ. ಸರ್ಕಾರಗಳ ವೈಫಲ್ಯ ಹಾಗೂ ರೈಲ್ವೆ ಇಲಾಖೆ ನಿರ್ಲಕ್ಷé ಅರಿತು ನ್ಯಾಯಾಲಯ ಕಣ್ಣು ತೆರೆಸಿದಂತಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next