Advertisement

ಮಾಜಿ ಸಂಸದ ವಿರೂಪಾಕ್ಷಪ್ಪ ಗೆ ಟಿಕೆಟ್‌ ನೀಡಲು ಆಗ್ರಹ

01:32 PM Jun 16, 2020 | Suhan S |

ಗೊರೇಬಾಳ: ಕೊಪ್ಪಳ ಮಾಜಿ ಸಂಸದ, ಕಲ್ಯಾಣ ಕರ್ನಾಟಕ ಭಾಗದ ಹಾಲುಮತ ಸಮಾಜದ ಹಿರಿಯ ಮುಖಂಡ ಕೆ. ವಿರೂಪಾಕ್ಷಪ್ಪ ಅವರಿಗೆ ವಿಧಾನ ಪರಿಷತ್‌ ಚುನಾವಣೆಗೆ ಟಿಕೆಟ್‌ ನೀಡಬೇಕು ಎಂದು ಮಾಜಿ ಶಾಸಕ, ಎಂಎಸ್‌ಐಎಲ್‌ ಮಾಜಿ ಅಧ್ಯಕ್ಷ ಹಂಪನಗೌಡ ಬಾದರ್ಲಿ ಕಾಂಗ್ರೆಸ್‌ ಹೈಕಮಾಂಡ್‌ನ್ನು ಒತ್ತಾಯಿಸಿದ್ದಾರೆ.

Advertisement

ತಾವು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿರೂಪಾಕ್ಷಪ್ಪ ಅವರಿಗೆ ಟಿಕೆಟ್‌ ಕೊಡಬೇಕು ಎಂದು ಮನವಿ ಮಾಡಿದ್ದೇವೆ. ಅವರು ಅರ್ಜಿ ಹಾಕಿದ್ದಾರೆ. ಶಾಸಕರಾಗಿ, ಸಂಸದರಾಗಿ ಉತ್ತರ ಕರ್ನಾಟಕದಲ್ಲಿ ಚಿರಪರಿಚಿತ ವ್ಯಕ್ತಿಯಾಗಿದ್ದಾರೆ. ರಾಜಕೀಯ ಅನುಭವಿ ಹಾಗೂ ಹಿರಿಯರಾಗಿದ್ದಾರೆ. ಟಿಕೆಟ್‌ ನೀಡಿದರೆ ಈ ಭಾಗದ ಹಾಲುಮತ ಸಮಾಜಕ್ಕೆ ಪ್ರಾಧಾನ್ಯತೆ ನೀಡಿದಂತಾಗುತ್ತದೆ.ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next