Advertisement

ನೆರೆ ಹಾವಳಿ ರಕ್ಷಣೆಗೆ ಪ್ರಾತ್ಯಕ್ಷಿಕೆ

02:58 PM Jul 07, 2019 | Team Udayavani |

ಚಿಕ್ಕೋಡಿ: ನೆರೆ ಹಾವಳಿಯಂತಹ ನೈಸರ್ಗಿಕ ವಿಪತ್ತಿನ ಸಂದರ್ಭದಲ್ಲಿ ಹೇಗೆ ರಕ್ಷಣೆ ಕೈಗೊಳ್ಳಬೇಕೆಂದು ಹುಬ್ಬಳ್ಳಿ ಹಾಗೂ ಗುಲ್ಬರ್ಗಾದ ಎಸ್‌ಡಿಆರ್‌ಎಫ್‌ ತಂಡ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಯಡೂರ ಗ್ರಾಮದ ಕೃಷ್ಣಾ ನದಿಯಲ್ಲಿ ಶನಿವಾರ ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು.

Advertisement

ಯಡೂರ ಗ್ರಾಮದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಸ್‌.ಬಿ.ಬೊಮ್ಮನಹಳ್ಳಿ, ಬಾಗಲಕೋಟೆ ಜಿಲ್ಲಾಧಿಕಾರಿ ಡಾ. ಆರ್‌.ರಾಮಚಂದ್ರನ್‌, ಬೆಳಗಾವಿ ಎಸ್‌ಪಿ ಸುಧೀರಕುಮಾರ ರೆಡ್ಡಿ, ಬಾಗಲಕೋಟೆ ಎಸ್‌ಪಿ ಲೋಕೇಶ ಸಮ್ಮುಖದಲ್ಲಿ ನೆರೆ ಹಾವಳಿಯಲ್ಲಿ ಜನರನ್ನು ರಕ್ಷಣೆ ಮಾಡುವ ಕುರಿತು ಎರಡು ಗಂಟೆಗಳ ಕಾಲ ಪ್ರಾತ್ಯಕ್ಷಿಕೆ ನೀಡಿದರು. ಈ ವೇಳೆ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಮಾತನಾಡಿ, ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾಡಳಿತ ಹೇಗೆ ಕಾರ್ಯ ನಿರ್ವಹಿಸಬೇಕು. ಅದಕ್ಕಾಗಿ ಎಸ್‌ಡಿಆರ್‌ಎಫ್‌ ತಂಡ ರಚಿಸಲಾಗಿದ್ದು, ಈ ತಂಡಕ್ಕೆ ಬೇಕಾಗುವ ಎಲ್ಲ ಸಲಕರಣೆಗಳು ಗ್ರಾಮ ಪಂಚಾಯತಿಯಲ್ಲಿ ಲಭ್ಯವಿರುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಹುಬ್ಬಳ್ಳಿ ಪ್ರಾಂತ್ಯದ ಮುಖ್ಯ ಅಗ್ನಿಶಾಮಕ ದಳದ ಅಧಿಕಾರಿಗಳಾದ ಸಿ.ಬಸವಣ್ಣಾ, ವಿಭಾಗಿಯ ಅಗ್ನಿಶಾಮಕ ದಳ ಅಕಾರಿ ಶ್ರೀಕಾಂತ, ಜಿಲ್ಲಾ ಅಗ್ನಿಶಾಮಕ ದಳ ಅಧಿಕಾರಿ ಶಿವಕುಮಾರ ಸ್ವಾಮಿ, ಚಿಕ್ಕೋಡಿ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಪ್ರವಾಹ ಮುನ್ನೆಚರಿಕೆ ಕ್ರಮದ ಕುರಿತು ಸಮಗ್ರ ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬೂದೆಪ್ಪ, ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ, ತಹಶೀಲ್ದಾರ ಡಾ| ಸಂತೋಷ ಬಿರಾದಾರ, ಸಿಪಿಐ ಬಸವರಾಜ ಮುಕರ್ತಿಹಾಳ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next