Advertisement

High Court ಸುನಿಲ್‌ ಕುಮಾರ್‌ ವಿರುದ್ಧ ಕ್ರಿಮಿನಲ್‌ ಕೇಸ್‌ ರದ್ದತಿಗೆ ನಕಾರ

11:50 PM Sep 13, 2024 | Team Udayavani |

ಬೆಂಗಳೂರು: ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಮಾನನಷ್ಟ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ.

Advertisement

ಆರೋಪ ಸಂಬಂಧದ ಪ್ರಕರಣ ಮತ್ತು ವಿಚಾರಣ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಶಾಸಕ ವಿ. ಸುನಿಲ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಚುನಾವಣೆಗಳ ಸಂದರ್ಭದಲ್ಲಿ ಏನು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಕಟಿಸಲಾಗಿವೆ, ಅವುಗಳ ಅನುಷ್ಠಾನ ಮಾಡಲಾಗಿದೆಯೇ, ಮುಂದೆ ಏನು ಮಾಡಬೇಕು ಎಂಬುದು ಚರ್ಚಾ ವಿಷಯಗಳಾಗುವುದಿಲ್ಲ. ಬದಲಿಗೆ ಅಭ್ಯರ್ಥಿಗಳ ನಡುವಿನ ಪರಸ್ಪರ ವಿರುದ್ಧದ ಭಾಷಣ ನಡೆಯುತ್ತಿದೆ. ಪಕ್ಷ ಅಥವಾ ಸರಕಾರಗಳು ಮಾಡಿದ ಕೆಲಸದ ಆಧಾರದಲ್ಲಿ ಚುನಾವಣೆ ನಡೆಯುತ್ತಿಲ್ಲ. ಈ ರೀತಿಯ ಕೆಸರೆರಚಾಟ ನಿಲ್ಲಬೇಕಾಗಿದೆ ಎಂದು ನ್ಯಾಯಮೂರ್ತಿಗಳು ಮೌಖಿಕವಾಗಿ ಅಭಿಪ್ರಾಯಪಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next