Advertisement

ಪ್ರೀತಿ ನಿರಾಕರಣೆ: ಎದೆಗೆ ಇರಿದುಕೊಂಡ ಯುವಕ

06:35 AM Feb 15, 2018 | |

ಹೊಸಪೇಟೆ: ಪ್ರೀತಿಸುವಂತೆ ಒತ್ತಾಯಿಸಿದ ಯುವಕನೊಬ್ಬ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಗರದಲ್ಲಿ ನಡೆದಿದೆ.

Advertisement

ಉಡುಪಿ ಮೂಲದ ವೀರೇಶ್‌ (24) ಆತ್ಮಹತ್ಯೆಗೆ ಯತ್ನಿಸಿದ ಯುವಕ. ನಗರದ ಜಿಮ್‌ವೊಂದರಲ್ಲಿ ತರಬೇತಿ ನೀಡುತ್ತಿದ್ದ ವೀರೇಶ, ಕಾಲೇಜು ವಿದ್ಯಾರ್ಥಿನಿಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದ.

ಅಲ್ಲದೇ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಪ್ರೀತಿಸುವಂತೆ ಒತ್ತಡ ಹೇರಿದ್ದ.ಪ್ರೀತಿಸದಿದ್ದರೆ ಸಾಮಾಜಿಕ ಜಾಲತಾಣ ಗಳಲ್ಲಿ ಫೋಟೋ ಹಾಕುವುದಾಗಿ ಬೆದರಿಕೆಯೊಡ್ಡಿದ್ದ. ಬುಧವಾರ ಪ್ರೇಮಿಗಳ ದಿನಾಚರಣೆಯಾಗಿದ್ದರಿಂದ ವಿದ್ಯಾರ್ಥಿನಿಯ ಮನೆಗೆ ಮೂವರು ಸ್ನೇಹಿತರೊಂದಿಗೆ ಹೋಗಿ ಬೆದರಿಸಿ, ಚಾಕುವಿನಿಂದ ಎದೆಗೆ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ. ಕೂಡಲೇ ಆತನನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next