Advertisement

ಚಿಟ್‌ಫ‌ಂಡ್‌ ಸ್ಕ್ಯಾಮ್‌;ಸಿಬಿಐ ತಂಡವನ್ನೇ ಬಂಧಿಸಿದ ಕೋಲ್ಕತಾ ಪೊಲೀಸರು

01:49 PM Feb 03, 2019 | |

ಕೋಲ್ಕತಾ: ಚಿಟ್‌ ಫ‌ಂಡ್‌ ಹಗರಣದ ತನಿಖೆಯ ಅಂಗವಾಗಿ ಸಿಬಿಐ ಅಧಿಕಾರಿಗಳು ಭಾನುವಾರ ಸಂಜೆ ಕೋಲ್ಕತಾ ಪೊಲೀಸ್‌ ಕಮಿಷನರ್‌ ರಾಜೀವ್‌ ಕುಮಾರ್‌ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಆದರೆ ಐವರು ಸಿಬಿಐ ಅಧಿಕಾರಿಗಳನ್ನು ಪೊಲೀಸರು ಗೇಟ್‌ ಬಳಿ ತಡೆದು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. 

Advertisement

ಘಟನೆ ನಡೆದ ಬೆನ್ನಲ್ಲೇ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲಂಡನ್‌ ಸ್ಟ್ರೀಟ್‌ನಲ್ಲಿರುವ ಕುಮಾರ್‌ ಅವರ ನಿವಾಸಕ್ಕೆ ದೌಡಾಯಿಸಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪಶ್ಚಿಮ ಬಂಗಾಳದ ಡಿಜಿಪಿ ಮತ್ತು ಕೋಲ್ಕತಾ ಮೇಯರ್‌ ಉಪಸ್ಥಿತರಿದ್ದರು. 

ರೋಸ್‌ ವ್ಯಾಲಿ ಹಗರಣ ಮತ್ತು ಶಾರದಾ ಚಿಟ್‌ ಫ‌ಂಡ್‌ ಹಗರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ನಡೆಸುತ್ತಿದ್ದು , ರಾಜೀವ್‌ ಕುಮಾರ್‌ ಅವರನ್ನು ಬಂಧಿಸಲು ಆಗಮಿಸಿದ್ದರು ಎನ್ನಲಾಗಿದೆ.

ಐಪಿಎಸ್‌ ಅಧಿಕಾರಿಯಾಗಿದ್ದ ರಾಜೀವ್‌ ಕುಮಾರ್‌ ಅವರು ಪಶ್ಚಿಮ ಬಂಗಾಳ ಸರಕಾರ ರಚಿಸಿದ್ದ ಎಸ್‌ಐಟಿಯಲ್ಲಿ ತನಿಖಾಧಿಯಾಗಿದ್ದರು. ಹಗರಣಕ್ಕೆ ಸಂಬಂಧಿಸಿ ನಾಪತ್ತೆಯಾಗಿರುವ ಕಡತಗಳು ಮತ್ತು ಮಹತ್ವದ ದಾಖಲೆಗಳಿಗೆ ಸಂಬಂಧಿಸಿ ಅವರನ್ನು ವಿಚಾರಣೆ ನಡೆಸಲು ಸಿಬಿಐ ಮುಂದಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next