Advertisement

ಡಿನೋಟಿಫಿಕೇಶನ್‌ ಹಗರಣ: ಬಿಎಸ್‌ವೈ, ಡಿಕೆಶಿಗೆ ಹಿನ್ನಡೆ

09:15 AM Jan 10, 2018 | Team Udayavani |

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. 2015ರ ಡಿಸೆಂಬರ್‌ನಲ್ಲಿ ಕರ್ನಾಟಕ ಹೈಕೋರ್ಟ್‌ ಇವರಿಬ್ಬರ ವಿರುದ್ಧದ ಭ್ರಷ್ಟಾಚಾರ ಮತ್ತು ಕ್ರಿಮಿನಲ್‌ ವಿಚಾರಣೆಯನ್ನು ರದ್ದು ಮಾಡಿ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಕಬ್ಟಾಳೆ ಗೌಡ ಎಂಬುವವರು ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾ.ಎ.ಕೆ. ಸಿಕ್ರಿ ನೇತೃತ್ವದ ಪೀಠ,
ಯಡಿಯೂರಪ್ಪ ಮತ್ತು ಶಿವಕುಮಾರ್‌ ಸೇರಿ ಹಗರಣದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡಿ, ಇವರ ವಿರುದ್ಧದ ವಿಚಾರಣೆಗೆ ಸಮ್ಮತಿ ನೀಡಿದೆ. 

Advertisement

ಕಬ್ಟಾಳೆಗೌಡ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಮತ್ತು ಕೆ.ಪರಮೇಶ್ವರ್‌, ಈ ಇಬ್ಬರು ಆರೋಪಿಗಳ ವಿರುದ್ಧದ ಕ್ರಿಮಿನಲ್‌ ವಿಚಾರಣೆಯನ್ನು ರದ್ದು ಮಾಡುವ ಮೂಲಕ ಹೈಕೋರ್ಟ್‌ ತಪ್ಪು ನಿರ್ಧಾರ ತೆಗೆದುಕೊಂಡಿದೆ. ಇವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಕ್ರಿಮಿನಲ್‌ ಭ್ರಷ್ಟಾಚಾರವೆಸಗಿದ್ದಾರೆ ಎಂದು ಆರೋಪಿಸಿದರು. ಇನ್ನು 2003ರಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್‌ ಅವರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಬೆಲೆ ಬಾಳುವ ಭೂಮಿಯೊಂದನ್ನು ಸ್ವಾಧೀನ ಪಡಿಸಿಕೊಂಡಿದ್ದರೂ, ಈ ಭೂಮಿಯನ್ನೇ 1.62 ಕೋಟಿಗೆ ಖರೀದಿ ಮಾಡಿದ್ದಾರೆ. ಪ್ರಕರಣದ ಆರೋಪಿ ಆಗಿನ ಸಬ್‌ ರಿಜಿಸ್ಟ್ರಾರ್‌ ಹಮೀದ್‌ ಅಲಿ ಎಂಬುವವರು, ಸರ್ಕಾರಿ ಭೂಮಿಯನ್ನು ಇನ್ನೊಬ್ಬರಿಗೆ
ಪರಭಾರೆ ಮಾಡಬಾರದು ಎಂಬ ನಿಯಮವಿದ್ದರೂ ಅದನ್ನು ಮೀರಿ ಸಚಿವರ ಹೆಸರಿಗೆ ಮಾಡಿಕೊಟ್ಟಿದ್ದರು. ಇದು 3 ವರ್ಷದ ಜೈಲು ಶಿಕ್ಷೆ ವಿಧಿಸಬಹುದಾದ ಅಪರಾಧ ಎಂದು ಅರ್ಜಿದಾರರು ಉಲ್ಲೇಖೀಸಿದ್ದಾರೆ.

ಇದರ ಜತೆಗೆ ಸಿಎಂ ಸ್ಥಾನದಲ್ಲಿದ್ದ ಯಡಿಯೂರಪ್ಪ ತಮ್ಮ ಅಧಿಕಾರ ಬಳಸಿಕೊಂಡು 2010ರ ಮೇ 13ರಂದು ಭೂಸ್ವಾಧೀನ ಪ್ರಕ್ರಿಯೆಯಿಂದ ಭೂಮಿಯೊಂದನ್ನು ಡಿ ನೋಟಿಫೈ ಮಾಡಿದ್ದರು ಎಂದೂ ಅರ್ಜಿದಾರರು ಆರೋಪಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next