Advertisement

ಶಿಕ್ಷಣ ಇಲಾಖೆ: ಹೊಸ ಚಾನೆಲ್‌ಗೆ ಚಿಂತನೆ

12:42 AM May 12, 2020 | Sriram |

ಬೆಂಗಳೂರು: ಕೋವಿಡ್-19 ಅನಂತರದ ಪರಿಸ್ಥಿತಿ ಸುದೀರ್ಘ‌ ಅವಧಿಗೆ ಉಳಿಯುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಗೆ ಪ್ರತ್ಯೇಕವಾಗಿ ದೂರದರ್ಶನದ ಚಾನೆಲ್‌ ಒಂದನ್ನು ಆರಂಭಿಸಲು ರಾಜ್ಯ ಸರಕಾರ ಮುಂದಾಗಿದ್ದು, ಈ ಕುರಿತು ಆರ್ಥಿಕ ಮತ್ತು ಭೌತಿಕ ಅಂಕಿ ಅಂಶಗಳ ವರದಿಯನ್ನು ವಾರದೊಳಗೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚಿಸಲಾಗಿದೆ.

Advertisement

ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಸೋಮವಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ದೂರದರ್ಶನದ ಹೆಚ್ಚುವರಿ ನಿರ್ದೇಶಕ ರಾಜಕುಮಾರ್‌ ಉಪಾಧ್ಯಾಯ ಅವರೊಂದಿಗೆ ಚರ್ಚೆ ನಡೆಸಿದ್ದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸಚಿವರು ಈ ಸಂಬಂಧ ಕೆಲವೊಂದು ಸೂಚನೆಗಳನ್ನು ನೀಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next