Advertisement

ಜನರ ಹಣ ಸೇಫ್ ಆಗಿದೆ: ಪಿಯೂಷ್‌ ಗೋಯಲ್‌

05:04 PM Jun 20, 2018 | Sharanya Alva |

ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿ ಸಾರ್ವಜನಿಕರ ಠೇವಣಿಯು ಅತ್ಯಂತ ಸುರಕ್ಷಿತವಾಗಿದೆ. ಈ ಬಗ್ಗೆ ಯಾವುದೇ ಆತಂಕ ಬೇಡ. ಸರ್ಕಾರ ನಿಮ್ಮ ಜತೆಗಿದೆ ಎಂದು ವಿತ್ತ ಸಚಿವ ಪಿಯೂಷ್‌ ಗೋಯಲ್‌ ಹೇಳಿದ್ದಾರೆ.

Advertisement

ಹಲವು ಬ್ಯಾಂಕು ವಂಚನೆ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆ ಅವರು ಈ ಭರವಸೆ ನೀಡಿದ್ದಾರೆ. ಇದೇ ವೇಳೆ, ಆರ್‌ಬಿಐಗೆ ಹೆಚ್ಚಿನ ಅಧಿಕಾರ ನೀಡಲು ಸರ್ಕಾರ ಮುಕ್ತವಾಗಿದೆ ಎಂದೂ ಅವರು ಹೇಳಿದ್ದಾರೆ. ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ನಮಗೆ ಹೆಚ್ಚಿನ ಅಧಿಕಾರದ ಅವಶ್ಯಕತೆಯಿದೆ ಎಂದು ಇತ್ತೀಚೆಗೆ ಆರ್‌ಬಿಐ ಗವರ್ನರ್‌ ಊರ್ಜಿತ್‌ ಪಟೇಲ್‌ ಕೇಳಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next