Advertisement

ಪ್ರಧಾನಿ ಮೋದಿ ಸಂವಾದದಲ್ಲಿ ಜಿಲ್ಲಾಧಿಕಾರಿಗಳು

08:20 AM Aug 11, 2017 | Harsha Rao |

ಮಂಗಳೂರು/ಉಡುಪಿ: ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾತ್ರಿ ದೇಶದ ಎಲ್ಲ ರಾಜ್ಯಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಮಂಗಳೂರಿ ನಿಂದ ದ.ಕ. ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್‌ ಹಾಗೂ ಅಪರ ಜಿಲ್ಲಾಧಿಕಾರಿ ಕುಮಾರ್‌, ಉಡುಪಿಯಿಂದ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಮತ್ತು ಪ್ರೊಬೆಷನರಿ ಐಎಎಸ್‌ ಅಧಿಕಾರಿ ಪೂವಿತ ಭಾಗವಹಿಸಿದ್ದರು.

Advertisement

ರಾತ್ರಿ 7ರಿಂದ 7.30ರ ವರೆಗೆ ದ.ಕ. ಜಿ.ಪಂ. ಸಭಾಂಗಣದಲ್ಲಿ ಪ್ರಧಾನಿ ಮೋದಿ ಯೊಂದಿಗಿನ ವಿಡಿಯೋ ಕಾನ್ಫರೆನ್ಸ್‌ ನಡೆಯಿತು. ನವ ಭಾರತ ಅಭಿಯಾನದ ಕುರಿತಂತೆ ಪ್ರಧಾನಿ ಯವರು ದೇಶದ ಎಲ್ಲ ಜಿಲ್ಲಾಧಿ ಕಾರಿಗಳ ಜತೆಗೆ ಅನಿಸಿಕೆ ವ್ಯಕ್ತ ಪಡಿ ಸಿದರು. ಪ್ರಧಾನಿಯಾದ ಬಳಿಕ ನರೇಂದ್ರ ಮೋದಿಯವರು ಜಿಲ್ಲಾಧಿ ಕಾರಿಯೊಂದಿಗೆ ಇಂಥದೊಂದು ಸಂವಾದ ನಡೆಸಿರುವುದು ಇದೇ ಮೊದಲು. ಅಷ್ಟೇ ಅಲ್ಲ, ಪ್ರಧಾನಿ ಯೊಂದಿಗಿನ ಸಂವಾದದಲ್ಲಿ ಪಾಲ್ಗೊಳ್ಳುವ ಸದವಕಾಶ ಜಿಲ್ಲಾಧಿ ಕಾರಿ ಜಗದೀಶ್‌ ಅವರಿಗೂ ಹೊಸ ಅನುಭವವುಂಟು ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next