Advertisement

ಕೊಲೆ ಕೇಸ್ : ಗುರ್ಮಿತ್ ರಾಮ್ ರಹೀಮ್ ಸಿಂಗ್ ಸೇರಿ ಐವರಿಗೆ ಶಿಕ್ಷೆ

11:39 AM Oct 08, 2021 | Team Udayavani |

ಪಂಚಕುಲ: ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಡೇರಾ ಸಚ್ಚಾ ಸೌಧ ಮುಖ್ಯಸ್ಥನಾಗಿದ್ದ ರಾಮ್ ರಹೀಮ್ ಸಿಂಗ್ ದೋಷಿ ಎಂದು ಸಿಬಿಐ ವಿಶೇಷ ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ. ರಾಮ್ ರಹೀಮ್ ಸಿಂಗ್ ಮಾತ್ರವಲ್ಲದ್ದೆ ಇತರ ಐವರು ಆರೋಪಿಗಳು ದೋಷಿಗಳು ಎಂದು ಕೋರ್ಟ್ ಹೇಳಿದ್ದು,ಶಿಕ್ಷೆಯ ಪ್ರಮಾಣವನ್ನು ಅಕ್ಟೋಬರ್ 12 ರಂದು ಪ್ರಕಟಿಸುವುದಾಗಿ ಹೇಳಿದೆ.

Advertisement

ಡೇರಾ ಸಚ್ಚಾ ಸೌಧ ಅನುಯಾಯಿಯಾಗಿದ್ದ ರಂಜಿತ್ ಸಿಂಗ್ ಅವರನ್ನು 2002 ರ ಜುಲೈ 10 ರಂದು ಹತ್ಯೆಮಾಡಲಾಗಿತ್ತು. ರಂಜಿತ್ ಪುತ್ರ ಜಗ್ ಸೀರ್ ಸಿಂಗ್ ಅವರು ದೂರು ದಾಖಲಿಸಿದ್ದರು. 2003 ರ ಡಿಸೆಂಬರ್ 3 ರಂದು ಸಿಬಿಐ ಕೋರ್ಟ್ ಎಫ್ ಐ ಆರ್ ದಾಖಲು ಮಾಡಿಕೊಂಡಿತ್ತು.

ಈಗಾಗಲೇ ರಾಮ್ ರಹೀಮ್ ಇಬ್ಬರು ಭಕ್ತೆಯರ ಮೇಲೆ ಆಶ್ರಮದಲ್ಲಿ ಅತ್ಯಾಚಾರ ನಡೆಸಿದ ಆರೋಪದಲ್ಲಿ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. 2017 ರಲ್ಲಿ ಸಿಬಿಐ ಕೋರ್ಟ್ ಶಿಕ್ಷೆ ವಿಧಿಸಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next