Advertisement

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್; ದೂರು ದಾಖಲು

09:49 PM Jul 18, 2022 | Team Udayavani |

ಹುಣಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಪೋಸ್ಟ್ ಮಾಡಿರುವ ಕಿಡಿಗೇಡಿಯನ್ನು ಬಂಧಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಹುಣಸೂರಿನ ಯುವ ಕಾಂಗ್ರೆಸ್ ಘಟಕವು ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

Advertisement

ಹುಣಸೂರಿನ ಕಲ್ಕುಣಿಕೆ ನಿವಾಸಿ ಗೋವಿಂದ ನಾಯಕ ಎಂಬಾತ ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದು, ಈತನು ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರು ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದ ಹೇಳಿಕೆಗೆ
ಸಿದ್ದರಾಮಯ್ಯ ನೀನು ಎಲ್ಲೆ ನಿಂತರೂ ಸೋಲು ಎಂಬಿತ್ಯಾದಿ ಅವಹೇಳನಕಾರಿ ಕಾಮೆಂಟ್ ಮಾಡಿದ್ದು ಸಮಾಜದಲ್ಲಿ ಶಾಂತಿ ಕದಡಲು ಕಾರಣನಾಗಿರುವ ಈತನನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಡಿವೈಎಸ್‌ಪಿ ರವಿಪ್ರಸಾದ್ ಹಾಗೂ ಇನ್ಸ್ಪೆಕ್ಟರ್ ಶ್ರೀನಿವಾಸ್‌ರಿಗೆ ದೂರು ನೀಡಲಾಗಿದೆ.

ಬಿಳಿಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜ್, ಯುವ ಕಾಂಗ್ರೆಸ್ ಅಧ್ಯಕ್ಷ ಸ್ವರೂಪ್, ಗವಿನಾಯಕ, ರಾಘು, ನಾಗರಾಜ್, ರಮೀಜ್, ದರ್ಶನ್, ಶಿಲ್ಪಿರವಿಗೌಡ ಮತ್ತಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next