ರಾಜಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪ್ರತಾಪ
ಸಿಂಹ ಎಚ್ಚರಿಸಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ 10-12 ದಿನಗಳಲ್ಲಿ ಸಾಮಾಜಿಕ
ಜಾಲತಾಣಗಳಲ್ಲಿ ಹಿಂದೂ ಧರ್ಮ ಹಾಗೂ ಹಿಂದು ಧರ್ಮದ ಹೆಣ್ಣುಮಕ್ಕಳ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ಹಾಗೂ ಹಿಂದುಗಳಿಗೆ ಪ್ರಾಣಬೆದರಿಕೆ ಹಾಕಿರುವ ವಿಡಿಯೋಗಳು ಪ್ರಸಾರವಾಗುತ್ತಿರುವುದು ಬಹುಚರ್ಚಿತ ವಿಷಯವಾಗಿದೆ.
Advertisement
ಸಿಡಿಯಲ್ಲಿ ಬಳಸಿರುವ ಭಾಷೆ, ತೋರಿರುವ ಮನಸ್ಥಿತಿ, ದುರುದ್ದೇಶದ ಬಗ್ಗೆ ರಾಜ್ಯದ ಜನರಲ್ಲಿ ಜಿಗುಪ್ಸೆ, ಆಕ್ರೋಶ ಮಡುಗಟ್ಟಿದ್ದು, ಅದು ಯಾವಾಗ ಸ್ಫೋಟಿಸುತ್ತದೆಯೋ ಗೊತ್ತಿಲ್ಲ, ಅದಕ್ಕಿಂತ ಮೊದಲು ಸರ್ಕಾರ ಎಚ್ಚೆತ್ತುಕೊಂಡು ಅದಕ್ಕೆ ಕಾರಣರಾದವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.