Advertisement

ಅವಹೇಳನಕಾರಿ ಹೇಳಿಕೆ: ಕ್ರಮಕ್ಕೆ ಪ್ರತಾಪ ಸಿಂಹ ಆಗ್ರಹ

03:45 AM Feb 13, 2017 | Harsha Rao |

ತುಮಕೂರು: ಹಿಂದೂ ಧರ್ಮ ಹಾಗೂ ಹಿಂದು ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಬೇಕಾದ ರಾಜ್ಯ ಸರ್ಕಾರ ಹಿಂದೂ ಧರ್ಮದ ವಿರುದ್ಧ ಮಾತನಾಡಿದವರನ್ನು ಬಿಟ್ಟು ಅವರು ಮಾತನಾಡಿದ್ದನ್ನು ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲಗಳಲ್ಲಿ ಪಸರಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗುತ್ತಿರುವುದು ಖಂಡನೀಯ. ಸರ್ಕಾರ ಈ ಪ್ರವೃತ್ತಿ ಬದಲಿಸಿಕೊಳ್ಳದಿದ್ದಲ್ಲಿ ಯುವ ಮೋರ್ಚಾದಿಂದ
ರಾಜಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪ್ರತಾಪ
ಸಿಂಹ ಎಚ್ಚರಿಸಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ 10-12 ದಿನಗಳಲ್ಲಿ ಸಾಮಾಜಿಕ
ಜಾಲತಾಣಗಳಲ್ಲಿ ಹಿಂದೂ ಧರ್ಮ ಹಾಗೂ ಹಿಂದು ಧರ್ಮದ ಹೆಣ್ಣುಮಕ್ಕಳ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ಹಾಗೂ ಹಿಂದುಗಳಿಗೆ ಪ್ರಾಣಬೆದರಿಕೆ ಹಾಕಿರುವ ವಿಡಿಯೋಗಳು ಪ್ರಸಾರವಾಗುತ್ತಿರುವುದು ಬಹುಚರ್ಚಿತ ವಿಷಯವಾಗಿದೆ.

Advertisement

ಸಿಡಿಯಲ್ಲಿ ಬಳಸಿರುವ ಭಾಷೆ, ತೋರಿರುವ ಮನಸ್ಥಿತಿ, ದುರುದ್ದೇಶದ ಬಗ್ಗೆ ರಾಜ್ಯದ ಜನರಲ್ಲಿ ಜಿಗುಪ್ಸೆ, ಆಕ್ರೋಶ ಮಡುಗಟ್ಟಿದ್ದು, ಅದು ಯಾವಾಗ ಸ್ಫೋಟಿಸುತ್ತದೆಯೋ ಗೊತ್ತಿಲ್ಲ, ಅದಕ್ಕಿಂತ ಮೊದಲು ಸರ್ಕಾರ ಎಚ್ಚೆತ್ತುಕೊಂಡು ಅದಕ್ಕೆ ಕಾರಣರಾದವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next