Advertisement

PM Modi ವಿರುದ್ಧ ಅವಹೇಳನಕಾರಿ ಪದ: ನಾಗರಾಜ ಕುಡುಪಲಿಗೆ ಜಾಮೀನು

09:39 PM Jan 17, 2024 | Team Udayavani |

ಸಾಗರ: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದ ಮೈಸೂರಿನ ವಕೀಲ ನಾಗರಾಜ ಕುಡುಪಲಿ ವಿರುದ್ಧ ಸಾಗರ ವಕೀಲ ಪ್ರವೀಣ್ ಕುಮಾರ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್‌ರವರು ಬುಧವಾರ ಇಲ್ಲಿನ ಪ್ರಧಾನ ವ್ಯವಹಾರಗಳ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಾಗಿ ವಿಚಾರಣೆ ಎದುರಿಸಿದರು. ಬಳಿಕ ನ್ಯಾಯಾಲಯವು ಜಾಮೀನು ನೀಡಿದ್ದಲ್ಲದೆ, ಮುಂದಿನ ವಿಚಾರಣೆಯನ್ನು ಮಾ.1 ಕ್ಕೆ ಮುಂದೂಡಿದೆ.

Advertisement

ಕಳೆದ ವರ್ಷ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದಬಳಕೆ ಹಿನ್ನೆಲೆಯಲ್ಲಿ ಮೈಸೂರಿನ ವಕೀಲ ನಾಗರಾಜ್ ಕುಡುಪಲಿ ವಿರುದ್ಧ ಸಾಗರ ನಗರ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ವಕೀಲ ಪ್ರವೀಣ್ ಕುಮಾರ್‌ರವರು ನ್ಯಾಯಾಲಯದ ಮೂಲಕ ದೂರು ದಾಖಲಿಸಿದ್ದರು. ಸೆಕ್ಷನ್ 500, 504, 506ರ ಅಡಿ ಪ್ರಕರಣ ದಾಖಲಿಸಿ ನ್ಯಾಯಾಲಯವು ಸಮನ್ಸ್ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next