Advertisement

ಜ.ಬಿಪಿನ್ ರಾವತ್ ಬಗ್ಗೆ ಅವಹೇಳನಕಾರಿ ಬರಹ: ಮಂಗಳೂರಿನಲ್ಲಿ ಪ್ರಕರಣ ದಾಖಲು

01:04 PM Dec 11, 2021 | Team Udayavani |

ಮಂಗಳೂರು : ಫೇಸ್ ಬುಕ್ ನಲ್ಲಿ ಹೆಲಿಕಾಪ್ಟಾರ್ ದುರಂತದಲ್ಲಿ ಮಡಿದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಬಗ್ಗೆ ಅವಹೇಳನ, ಪ್ರಚೊದನಾಕಾರಿ ಬರಹ ಪ್ರಕಟಿಸಿದ ಮೂವರ ವಿರುದ್ದ ಮಂಗಳೂರಿನಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಈ ಬಗ್ಗೆ ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ತನಿಖೆ ನಡೆಯುತ್ತಿದೆ.‌ಆರೋಪಿಗಳ ಪತ್ತೆ ಹಚ್ಚಲಾಗುವುದು, ಇವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಬಗ್ಗೆಯೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ತಮಿಳುನಾಡಿನ ಕುನೂರ್ ಬಳಿ ಬುಧವಾರ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿಜನರಲ್ ಬಿಪಿನ್ ರಾವತ್, ಪತ್ನಿ ಮತ್ತು ಇತರ 11 ಮಂದಿ ಸಾವನ್ನಪ್ಪಿದ್ದನ್ನು ವಿಚಾರವನ್ನು ಕೆಲವರು ಅಪಹಾಸ್ಯ ಮಾಡಿ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಆಕ್ರೋಶ ಉಂಟಾಗಿತ್ತು.

ಇದನ್ನೂ ಓದಿ :ಕ್ರಿಶ್ಚಿಯನ್ ನಿಯೋಗದಿಂದ ಸಿಎಂ ಭೇಟಿ : ಮತಾಂತರ ನಿಷೇಧ ಕಾಯಿದೆ ಅವಶ್ಯಕತೆ ಇಲ್ಲ

Advertisement

Udayavani is now on Telegram. Click here to join our channel and stay updated with the latest news.

Next