Advertisement

ಹೊಳಲ್ಕೆರೆ: ಶಾಸಕನ ವಿರುದ್ಧ ಅವಹೇಳನಕಾರಿ ಬರಹ: ಆರೋಪಿ ಬಂಧನ

12:35 PM Oct 07, 2022 | Team Udayavani |

ಹೊಳಲ್ಕೆರೆ: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಕ್ಷೇತ್ರದ ಶಾಸಕ ಎಂ.ಚಂದ್ರಪ್ಪ ಅವರ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅವಹೇನಕಾರಿ ಪದಗಳಿಂದ ನಿಂದಿಸಿ, ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

Advertisement

ಹೊಳಲ್ಕೆರೆ ತಾಲೂಕಿನ ಹುಲೆ ಮಳಲಿ ಹರೀಶ್ ಬಂಧಿತ ಆರೋಪಿ.

ಘಟನೆಯ ವಿವರ: ಹೊಳಲ್ಕೆರೆ ಕ್ಷೇತ್ರದ ಶಾಸಕ ಎಂ. ಚಂದ್ರಪ್ಪ ತಾಲೂಕಿನ ವಿಶ್ವನಾಥನ ಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.

ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ಹಲವಾರು ಫೋಟೋಗಳನ್ನು ಫೇಸ್ಬುಕ್ ನಲ್ಲಿ ಅಪ್ಲೋಡ್ ಮಾಡಲಾಗಿತ್ತು. ಈ ಪೋಸ್ಟ್‌ನ ಕುರಿತು ಹೊಳಲ್ಕೆರೆ ತಾಲೂಕಿನ ಹರೀಶ್, ಶಾಸಕನ ವಿರುದ್ಧ ಅವೇಳನಕಾರಿ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎಂದು ಬಿಜೆಪಿ ಪಕ್ಷದ ಮುಖಂಡ ಗಿರೀಶ್ ಹೊಳಲ್ಕೆರೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಈ ಹಿನ್ನೆಲೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಹೊಳಲ್ಕೆರೆ ಪೊಲೀಸ್, ಆರೋಪಿ ಹರೀಶ್ ನನ್ನು ಬಂಧಿಸಿ, ನ್ಯಾಯಾಲಯದ ಬಂಧನಕ್ಕೆ ನೀಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next