Advertisement

ಅತೃಪ್ತ ಶಾಸಕರು ಸಿದ್ದರಾಮಯ್ಯಗೆ ವಿವರಣೆ ನೀಡಿ

12:30 AM Jan 30, 2019 | Team Udayavani |

ಬೆಂಗಳೂರು: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿ ಪಕ್ಷದ ನೋಟಿಸ್‌ಗೆ ಪತ್ರದ ಮೂಲಕ ಉತ್ತರ ನೀಡಿರುವ ಅತೃಪ್ತ ಶಾಸಕರು, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯರನ್ನು ಖುದ್ದು ಭೇಟಿ ಮಾಡಿ ವಿವರಣೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳು ನಡೆದ ಸಂದರ್ಭದಲ್ಲಿ ಪಕ್ಷದ ಶಾಸಕರು ವಾರಗಟ್ಟಲೇ ಯಾರಿಗೂ ಸಿಗದೇ ದೂರ ಉಳಿಯುವುದು ಸರಿಯಲ್ಲ. ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿದ್ದ ರಮೇಶ್‌ ಜಾರಕಿಹೊಳಿ, ನಾಗೇಂದ್ರ, ಮಹೇಶ್‌ ಕುಮಟಳ್ಳಿ,  ಉಮೇಶ್‌ ಜಾಧವ್‌ ಅವರಿಗೆ ನೋಟಿಸ್‌ ನೀಡಲಾಗಿದೆ. ಅವರು ಪತ್ರದ ಮೂಲಕ ವಿವರಣೆ ನೀಡಿದರೆ ಸಾಲದು. ಶಾಸಕಾಂಗ ಪಕ್ಷದ ನಾಯಕರ ಎದುರು ಖುದ್ದಾಗಿ ಹಾಜರಾಗಿ ತಮ್ಮ ಗೈರು ಹಾಜರಿಯ ಬಗ್ಗೆ ಸೂಕ್ತ ವಿವರಣೆ ನೀಡಬೇಕು. ಇಲ್ಲದಿದ್ದರೆ, ಅವರಿಗೆ ಮತ್ತೂಂದು ನೋಟಿಸ್‌ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕುಮಾರಸ್ವಾಮಿ ನಮಗೆ ಸಿಎಂ: ಸಮ್ಮಿಶ್ರ ಸರ್ಕಾರದಲ್ಲಿ ಎಚ್‌.ಡಿ.ಕುಮಾರಸ್ವಾಮಿಯವರೇ ನಮಗೆ ಮುಖ್ಯಮಂತ್ರಿ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಸಮ್ಮಿಶ್ರ ಸರ್ಕಾರದ ಬಗ್ಗೆ ಯಾವುದೇ ರೀತಿಯ ಗೊಂದಲದ ಹೇಳಿಕೆಗಳನ್ನು ನೀಡುವ ಪಕ್ಷದ ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. 

Advertisement

Udayavani is now on Telegram. Click here to join our channel and stay updated with the latest news.

Next