Advertisement

ಭಾರತ್‌ ಜೋಡೋ ಯಾತ್ರಿಗಳ ಸಮಿತಿಗೆ ದೇಶಪಾಂಡೆ ಅಧ್ಯಕ್ಷ

09:14 PM Sep 20, 2022 | Team Udayavani |

ಬೆಂಗಳೂರು: ರಾಹುಲ್‌ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರಿಗಳ ರಾಜ್ಯ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ಅವರನ್ನು ನೇಮಿಸಲಾಗಿದೆ.

Advertisement

ದೇಶಪಾಂಡೆ ಅವರಿಗೆ ಹೊಣೆಗಾರಿಕೆ ನೀಡದ ಬಗ್ಗೆ ಪಕ್ಷದ ವಲಯದಲ್ಲಿ ಅಸಮಾಧಾನ ಉಂಟಾಗಿದ್ದ ಬೆನ್ನಲ್ಲೇ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಂದ ಈ ನೇಮಕಾತಿ ಆದೇಶ ಹೊರಬಿದ್ದಿದೆ.

ದೇಶಪಾಂಡೆ ಅವರ ನೇತೃತ್ವದಲ್ಲಿ 22 ಮಂದಿ ಶಾಸಕರು, ಮಾಜಿ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳನ್ನು ಸಮಿತಿಗೆ ನೇಮಿಸಲಾಗಿದೆ. ಭಾರತ್‌ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ಸಮಿತಿಗಳಲ್ಲಿ ದೇಶಪಾಂಡೆ ಅವರಿಗೆ ಹೊಣೆಗಾರಿಕೆ ನೀಡದ ಬಗ್ಗೆ ಹಾಗೂ ಪಕ್ಷದ ಕಾರ್ಯಕ್ರಮದಲ್ಲೇ ಬಹಿರಂಗವಾಗಿ ರಾಹುಲ್‌ಗಾಂಧಿಯವರ ಕಾರ್ಯಕ್ರಮಕ್ಕೆ ಜನರನ್ನು ಕಳುಹಿಸಿ ಎಂದರೆ ಸಾಧ್ಯವಿಲ್ಲ ಎಂದು ದೇಶಪಾಂಡೆ ಅವರು ಹೇಳಿದರು ಎಂದು ಡಿ.ಕೆ.ಶಿವಕುಮಾರ್‌ ಅಸಮಾಧಾನ ಹೊರಹಾಕಿದ್ದ ಬಗ್ಗೆ ಪಕ್ಷದ ಶಾಸಕರ ವಲಯದಲ್ಲಿ ಅಸಮಾಧಾನ ಉಂಟಾಗಿತ್ತು.

ಇದೇ ಸಂದರ್ಭದಲ್ಲಿ ಭಾರತ್‌ ಜೋಡೋ ಯಾತ್ರೆಯ ಸಾರಿಗೆ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಚ್‌.ಎಂ.ರೇವಣ್ಣ ಅವರನ್ನು ನೇಮಿಸಿ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next