Advertisement

ದೇಸಿ ಆಟ ಖೋ ಖೋ ಜನಪ್ರಿಯ ಗ್ರಾಮೀಣ ಕ್ರೀಡೆ: ತ್ಯಾಗಿ

12:23 PM May 10, 2022 | Team Udayavani |

ಮೂಡಲಗಿ: ಖೋ ಖೋ ದೇಶಿ ಕ್ರೀಡೆಯಾಗಿದ್ದು ರಾಷ್ಟ್ರ ಹಾಗೂ ಅಂತರಾಷ್ಟೀಯ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದೆ ಎಂದು ಭಾರತೀಯ ಖೋ-ಖೋ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಂ.ಎಸ್‌. ತ್ಯಾಗಿ ಹೇಳಿದರು.

Advertisement

ತಾಲೂಕಿನ ನಾಗನೂರ ಶ್ರೀ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ಶಾಲಾ ಮೈದಾನದಲ್ಲಿ ರಾಜ್ಯ ಖೋ-ಖೋ ಅಸೋಸಿಯೇಷನ್‌ ಹಾಗೂ ಬೆಳಗಾವಿ ಜಿಲ್ಲಾ ಖೋ-ಖೋ ಅಸೋಸಿಯೇಶನ್‌ ಮತ್ತು ನಾಗನೂರ ಶ್ರೀ ಮಹಾಲಿಂಗೇಶ್ವರ ನ್ಪೋಟ್ಸì ಕ್ಲಬ್‌ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ 18 ವರ್ಷದೊಳಗಿನ ಬಾಲಕ/ಬಾಲಕಿಯರ ಹೊನಲು ಬೆಳಕಿನ ರಾಜ್ಯಮಟ್ಟದ ಖೋ-ಖೋ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ನವದೆಹಲಿಯಲ್ಲಿ ಮುಂಬರುವ ಆಗಸ್ಟ್‌ ಮತ್ತು ಸೆಪ್ಟೆಂಬರ್‌ನಲ್ಲಿ ಏಷಿಯನ್‌ ಖೋ-ಖೋ ಚಾಂಪಿಯನ್‌ ಷಿಪ್‌ ಆಯೋಜಿಸುವುದರ ಜೊತೆಗೆ ಕ್ರಿಯೆಟಿವ್‌ ಖೋ-ಖೋ ಕ್ರೀಡಾಕೂಟ ನಡೆಸಲಾಗುವುದು ಎಂದರು.

ಸಾನ್ನಿಧ್ಯ ವಹಿಸಿದ್ದ ಹುಕ್ಕೇರಿ ಕ್ಯಾರಗುಡ್ಡ ಮಠದ ಅಭಿನವ ಮಂಜುನಾಥ ಶ್ರೀಗಳು ಮಾತನಾಡಿ, ಕ್ರೀಡಾಕೂಟಗಳು ದೇಹ ಮತ್ತು ಮನಸ್ಸು ಒಂದುಗೂಡಿಸುವ ಕೆಲಸ ಮಾಡುತ್ತವೆ. ಕ್ರೀಡಾಪಟುಗಳು ವ್ಯಸನಿಗಳಾಗದೆ ಪ್ರತಿಯೊಬ್ಬರು ಚಾರಿತ್ರ್ಯವಂತರಾಗಬೇಕು ಎಂದರು.

ಬೆಂಗಳೂರು ಖೋ ಖೋ ಅಸೋಸಿಯೇಶನ್‌ನ ಅಧ್ಯಕ್ಷ ಹಾಗೂ ಕೆ.ಕೆ.ಎಫ್‌.ಐ ಉಪಾಧ್ಯಕ್ಷ ಲೋಕೇಶ್ವರ ಮಾತನಾಡಿ, ಭಾರತೀಯ ಖೋ ಖೋ ಸಂಸ್ಥೆಯಿಂದ ಹತ್ತು ಲಕ್ಷ ರೂ. ಮೌಲ್ಯದ ಮ್ಯಾಟ್‌ ನೀಡಿದ್ದು ಕ್ರೀಡಾಪಟುಗಳು, ಕ್ರೀಡೆಗೆ ಹೆ„ಟೆಕ್‌ ಸ್ಪರ್ಶ ನೀಡಿದಂತಾಗಿದೆ ಎಂದರು.

ಕರ್ನಾಟಕ ಒಲಿಂಪಿಕ್ಸ್‌ ಅಸೋಸಿಯೇಶನ್‌ ಉಪಾಧ್ಯಕ್ಷ ಕೆ.ಪಿ.ಪುರುಷೋತ್ತಮ್‌ ಮಾತನಾಡಿ, ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಕೇಂದ್ರ ಸರ್ಕಾರದಿಂದ ಟೋಕಿಯೊ ಒಲಿಂಪಿಕ್ಸ್‌, ಪ್ಯಾರಾ ಒಲಿಂಪಿಕ್ಸ್‌ ಸೇರಿದಂತೆ ಫ್ರಾನ್ಸ್‌ ಒಲಿಂಪಿಕ್ಸ್‌ ನಲ್ಲಿ ಪಾಲ್ಗೊಳ್ಳಲು 75 ಕ್ರೀಡಾಪಟುಗಳುಗೆ 5 ವರ್ಷದಲ್ಲಿ ಒಬ್ಬ ಕ್ರೀಡಾಪಟುವಿಗೆ 5 ಲಕ್ಷ ರೂ. ನಂತೆ ಖರ್ಚು ಮಾಡಲು ಅನುದಾನ ದೊರೆತಿದ್ದು ಕ್ರೀಡೆಗೆ ಸಿಕ್ಕ ಅವಕಾಶವಾಗಿದೆ ಎಂದರು.

Advertisement

ಕೆಎಂಎಫ್‌ ಅಧ್ಯಕ್ಷ ಹಾಗೂ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಕ ಅವರು ಕ್ರೀಡಾಕೂಟದ ಉತ್ತೇಜನಕ್ಕಾಗಿ 2 ಲಕ್ಷ ರೂ. ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸನಗೌಡ ರಾ ಪಾಟೀಲ, ಕರ್ನಾಟಕ ರಾಜ್ಯ ಖೋ ಖೋ ಅಸೋಸಿಯೇಶನ್‌ ಉಪಾಧ್ಯಕ್ಷ ಶಿವಯೋಗಿ ಎಲಿ, ಬೆಂಗಳೂರು ಖೋ ಖೋ ಅಸೋಸಿಯೇಶನ್‌ ಕಾರ್ಯದರ್ಶಿ ಮಲ್ಲಿಕಾರ್ಜುನಯ್ಯ. ಆರ್‌, ಬೆಳಗಾವಿ ಪೊಲೀಸ್‌ ಸಬ್‌ ಇನ್ಸ್‌ ಪೆಕ್ಟರ್‌ ವಂದನಾ ಶಿಂಧೆ, ಪರಸಪ್ಪ ಬಬಲಿ ಮಾತನಾಡಿದರು.

ವೇದಿಕೆಯಲ್ಲಿ ಶ್ರೀನಿವಾಸ್‌ಗೌಡ ಪಾಟೀಲ, ಕೆಂಚಗೌಡ ಪಾಟೀಲ, ಬಲವಂತ ಕರಬನ್ನವರ, ಬಸವರಾಜ ಕರಿಹೊಳಿ, ಬಸವರಾಜ ಹೊಸಮನಿ, ಚಂದ್ರು ಬೆಳಗಲಿ, ಎಸ್‌.ಎಲ್‌. ಹೊಸಮನಿ, ಸಿದ್ದಣ್ಣ ಯಾದಗೂಡ , ಬಿ ಜಿ.ತಡಸನ್ನವರ, ಕೆ.ಕೆ. ಸಕ್ರೆಪ್ಪಗೋಳ, ಭೀಮಗೌಡ ಹೊಸಮನಿ, ಶಿವಾನಂದ ಹಳಿಗೌಡರ, ಕೆ.ಎಸ್‌.ಮಾರಾಪೂರ, ಬಿ.ಎಸ್‌.ಮೇಟಿ, ಗಜಾನನ ಯರಗಣವಿ, ಈರಣ್ಣ ಬಿ ಹಳಿಗೌಡರ ಇತರರು ಇದ್ದರು.

ಉಪಾಧ್ಯಕ್ಷ ಸಿ.ಆರ್‌ .ಪೂಜೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಆರ್‌. ಎಂ.ಗುಡಿಸಿ ಹಾಗೂ ರವೀಂದ್ರ ಕಬ್ಬೂರ ನಿರೂಪಿಸಿದರು. ದೈಹಿಕ ಶಿಕ್ಷಕ ಸಿ.ಎಸ್‌.ಹಿರೇಮಠ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next