Advertisement

Desi Swara: ದುಬೈ: ಕೆಂಪೇಗೌಡರ ಉತ್ಸವ-2023; ಒಕ್ಕಲಿಗರ ಸಂಘ ಯುಎಇ

01:51 PM Nov 11, 2023 | Team Udayavani |

ದುಬೈ:ಒಕ್ಕಲಿಗರ ಸಂಘ ಯುಎಇ ವತಿಯಿಂದ ದಿನಾಂಕ ಅ.29ರಂದು ನಾಡಪ್ರಭು ಕೆಂಪೇಗೌಡರ ಉತ್ಸವವನ್ನು ಶ್ರೀ ಆದಿಚುಂಚನಗಿರಿ ಮಹಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಡಾ| ನಿರ್ಮಲಾನಂದನಾಥ ಮಹಾಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿದರು.

Advertisement

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುಎಇ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಡಾ| ರಶ್ಮಿ ನಂದಕಿಶೋರ್‌ ಬೆಂಗಳೂರು ಅವರು ವಹಿಸಿಕೊಂಡಿದ್ದರು. ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್‌, ಶಾಸಕರಾದ ಸಮೃದ್ಧಿ ಮಂಜುನಾಥ್‌, ಸ್ವರೂಪ್‌ ಪ್ರಕಾಶ್‌, ರವಿ ಬಿಳಿಶಿವಳೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಒಕ್ಕಲಿಗರ ಸಂಘದ ಪದಾಧಿಕಾರಿಗಳು ಆಯೋಜಿಸಿದ ವರ್ಣರಂಜಿತ ಅಚ್ಚುಕಟ್ಟಾದ ಕಾರ್ಯಕ್ರಮದಲ್ಲಿ ನಡೆದ ಸಮುದಾಯದ ಮತ್ತು ಕನ್ನಡ ನಾಡಿನ ಹಲವು ಸಾಂಸ್ಕೃತಿಕ ಚಟುವಟಿಕೆಗಳು ನೆರೆದ ಅನಿವಾಸಿ ಕನ್ನಡಿಗರ ಮನದಲ್ಲಿ ಸಂತಸ ಮೂಡಿಸಿತು. ತಾಯಿನಾಡಿನಿಂದ ವಿವಿಧ ಸಮುದಾಯದ ರಾಜಕೀಯ ನೇತಾರರನ್ನು ಕರೆಸಿ ಕಾರ್ಯಕ್ರಮ ನಡೆಸಿದ್ದು ವಿಶೇಷವಾಗಿತ್ತು.

ವರದಿ: ರಫೀಕಲಿ, ದುಬೈ

Advertisement

Udayavani is now on Telegram. Click here to join our channel and stay updated with the latest news.

Next