Advertisement

ಸಚಿವನಾಗಬೇಕೆಂಬ ಆಸೆ ಇದೆ: ವಿಶ್ವನಾಥ್‌

11:08 PM Jan 18, 2020 | Team Udayavani |

ಬೆಂಗಳೂರು: ಸಚಿವ ಆಗಬೇಕೆಂಬ ಆಸೆ ಇದ್ದೇ ಇದೆ. ಆದರೆ ಬಹಿರಂಗವಾಗಿ ಕೇಳಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌.ಆರ್‌.ವಿಶ್ವನಾಥ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿ, ಕಷ್ಟ ಕಾಲದಲ್ಲಿ ಮಂತ್ರಿ ಸ್ಥಾನ ಕೇಳಿಲ್ಲ.

Advertisement

ಆದರೆ, ಅವಕಾಶ ಇದ್ದರೆ ಕೊಡಿ ಕೆಲಸ ಮಾಡಿ ತೋರಿಸುತ್ತೇನೆಂದು ಹೇಳಿದ್ದೇನೆ ಎಂದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಸಂಪುಟ ವಿಸ್ತರಣೆಗೆ ಒಪ್ಪಿಗೆ ನೀಡಿದರೂ, ಮುಖ್ಯಮಂತ್ರಿ ವಿದೇಶ ಪ್ರವಾಸ ಮುಗಿಸಿಕೊಂಡು ವಾಪಸ್‌ ಬಂದ ನಂತರವೇ ವಿಸ್ತರಣೆ ಯಾಗಲಿದೆ ಎಂದು ಹೇಳಿದರು.

ಇದೇ ವೇಳೆ, ಸೃಷ್ಟಿ ಆರ್ಟ್‌ ಕಾಲೇಜಿನ ಗೊಂದಲದ ಬಗ್ಗೆ ಸ್ಪಷ್ಟೀಕರಣ ನೀಡಿದ ಅವರು, ನಾವು ಕಾಲೇಜು ವಿದ್ಯಾರ್ಥಿಗಳಿಗೆ ಬೆದರಿಕೆಯನ್ನೂ ಹಾಕಿಲ್ಲ. ಕಾಲೇಜು ವಿದ್ಯಾರ್ಥಿನಿಯರ ಉಡುಗೆ ಬಗ್ಗೆಯೂ ಮಾತನಾಡಿಲ್ಲ. ಆದರೆ, ಕಾಲೇಜು ಆಡಳಿತ ಮಂಡಳಿ ತಮ್ಮ ತಪ್ಪು ಮುಚ್ಚಿಕೊಳ್ಳಲು ನಮ್ಮ ವಿರುದ್ಧ ವದಂತಿ ಹರಿ ಬಿಟ್ಟಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next