Advertisement

Kolkata: ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದರೂ ಮುಂದುವರಿದ ಕಿರಿಯ ವೈದ್ಯರ ಪ್ರತಿಭಟನೆ!

08:48 PM Sep 10, 2024 | Team Udayavani |

ಕೋಲ್ಕತಾ: ಮಂಗಳವಾರ ಸಂಜೆಯೊಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದ್ದರೂ ಸಹ ಆರ್‌ಕಾರ್‌ ಆಸ್ಪತ್ರೆಯ ಕಿರಿಯ ವೈದ್ಯರ ಪ್ರತಿಭಟನೆ ಮಂಗಳವಾರವೂ ಮುಂದುವರಿದಿದೆ. ‌

Advertisement

ನ್ಯಾಯ ದೊರೆಯುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ. ನಮ್ಮ ಬೇಡಿಕೆಗಳು ಈಡೇರಿಲ್ಲ. ಸಂತ್ರಸ್ತರಿಗೆ ನ್ಯಾಯ ದೊರಕಿಲ್ಲ. ಕೆಲಸ ಬಹಿಷ್ಕರಿಸುವ ಮೂಲಕ ನಮ್ಮ ಹೋರಾಟ ಮುಂದುವರಿಯಲಿದೆ. ಆರೋಗ್ಯ ಕಾರ್ಯದರ್ಶಿ ರಾಜೀನಾಮೆ ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಆರ್‌ಜಿ ಕಾರ್‌ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾನಿರತ ವೈದ್ಯರು ಮಂಗಳವಾರ ಸಾಯಂಕಾಲದೊಳಗೆ ಕರ್ತವ್ಯಕ್ಕೆ ಹಾಜರಾದರೆ ಅವರ ವಿರುದ್ಧ ಯಾವುದೇ ಶಿಸ್ತುಕ್ರಮ ಜರುಗಿಸಬಾರದು ಎಂದು ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next