Advertisement

Drought ಪರಿಹಾರಕ್ಕೆ ಪತ್ರ ಬರೆದರೂ ಕೇಂದ್ರದಿಂದ ಉತ್ತರವಿಲ್ಲ: ಸಚಿವ ಕೃಷ್ಣ ಬೈರೇಗೌಡ

11:29 PM Oct 21, 2023 | Team Udayavani |

ಚಾಮರಾಜನಗರ: ರಾಜ್ಯದಲ್ಲಿ ಉಂಟಾಗಿರುವ ಬರ ಹಿನ್ನೆಲೆ ಸೂಕ್ತ ಪರಿಹಾರ ನೀಡುವಂತೆ ಈಗಾಗಲೇ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಆದರೆ, ಇಲ್ಲಿಯ ತನಕ ಯಾವುದೇ ಉತ್ತರ ದೊರಕಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ರಾಜ್ಯದಲ್ಲಿ 216 ತಾಲೂಕುಗಳಲ್ಲಿ ಬರ ಘೋಷಿಸಲಾಗಿದೆ. ಕೇಂದ್ರ ಗೃಹ ಹಾಗೂ ಕೃಷಿ ಸಚಿವರನ್ನು ಭೇಟಿ ಮಾಡಲು ಅವಕಾಶ ಕೇಳುತ್ತಿದ್ದೇವೆ. ಈ ತನಕ ಕೊಟ್ಟಿಲ್ಲ. ಮುಂದಿನ ವಾರ ದಿಲ್ಲಿಗೆ ತೆರಳಿ ಅಲ್ಲಿಯೇ ಸಚಿವರನ್ನು ಭೇಟಿ ಮಾಡುವ ಕೆಲಸ ಮಾಡಲಾಗುವುದು.

ಎನ್‌ಡಿಆರ್‌ಎಫ್ ಪ್ರಕಾರ ರಾಜ್ಯಕ್ಕೆ ಬರಬೇಕಾದ ಅನುದಾನ ಕೊಡಬೇಕು. ಬರ ಬಂದಾಗ ಪರಿಹಾರ ಕೊಡುವುದು ಕೇಂದ್ರ ಸರಕಾರದ ಕರ್ತವ್ಯ. ಕಾನೂನು ಪ್ರಕಾರ ಏನಿದೆಯೋ ಅದನ್ನು ಅವರು ಕೊಡಲೇ ಬೇಕು. ಮುಂದಿನ ದಿನಗಳಲ್ಲಿ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ಇದೆ ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next