Advertisement

ಅಕಾಲಿಕ ಮಳೆಯಿಂದ ಬೆಳೆ ನಾಶ-ಪರಿಶೀಲನೆ

08:58 PM Apr 07, 2021 | Team Udayavani |

ಯಾದಗಿರಿ: ನಗರದಲ್ಲಿ ಸೋಮವಾರ ಸಾಯಂಕಾಲ ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ಕೃಷಿ ಮಾರುಕಟ್ಟೆ ಸಮಿತಿ ಆವರಣದಲ್ಲಿ ಮಾರಾಟಕ್ಕಾಗಿ ಸಂಗ್ರಹಿಸಿದ್ದ ಶೇಂಗಾ ಬೆಳೆ ಹಾನಿಯಾದ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ನಂತರ ಮಾತನಾಡಿದ ಅವರು, ಎಪಿಎಂಸಿ ಆವರಣದಲ್ಲಿ ಮಾರಾಟಕ್ಕಾಗಿ ಸಂಗ್ರಹಿಸಿದ್ದ 50-60 ಕ್ವಿಂಟಲ್‌ ಶೇಂಗಾ ಮಳೆಯಿಂದ ನಷ್ಟವಾಗಿದ್ದು, ಕೂಡಲೇ ನಷ್ಟಕ್ಕೆ ಒಳಗಾದ 13 ರಿಂದ 15 ಜನ ರೈತರಿಗೆ ಸರ್ಕಾರದಿಂದ ಪರಿಹಾರಕ್ಕಾಗಿ ಪತ್ರ ಬರೆದು ಪರಿಹಾರ ಒದಗಿಸಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಭೀಮರಾಯ ಕಲ್ಲೂರು, ಕೃಷಿ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸುಮಂಗಲಾ ದೇವಿ, ವರ್ತಕರ ಸಂಘದ ಅಧ್ಯಕ್ಷರು ಹಾಗೂ ಬೆಳೆ ನಷ್ಟಕ್ಕೆ ಒಳಗಾದ ರೈತರು ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next